ಮೈಸೂರು

ಕಪಿಲಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ.

ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ ಅವರು ರಾಷ್ಟ್ರೀಯ ಹೆದ್ದಾರಿ 766ನ ಕಪಿಲಾ ಸೇತುವೆ ಮೇಲೆ ತಮ್ಮ ಕಾರು ನಿಲ್ಲಿಸಿ ಚಪ್ಪಲಿ ಮೊಬೈಲು ಹಾಗೂ ಕಾರಿನ ಕೀ-ಯನ್ನು ಕಾರಿನಲ್ಲೇ ಬಿಟ್ಟು ಅಲ್ಲೇ ಸೇತುವೆಯಿಂದ ನದಿಗೆ ಜಿಗಿದು ಅಸು ನೀಗಿದ್ದಾರೆ ಎನ್ನಲಾಗಿದೆ.

ಬಾಗಿಲು ತೆರದ ಕಾರು ಬಹಳ ಸಮಯ ಅಲ್ಲೆ ನಿಂತಿರುವದನ್ನು ಕಂಡವರು ಪೊಲೀಸರಿಗೆ ಸುದ್ದಿ ತಲುಪಿಸಿ ಅವರು ಬಂದು ಪರಿಕ್ಷಿಸಿ ಮಂಡ್ಯ ನೋಂದಣಿಯ ಕಾರಿನಿಂದ ಮಾಲಿಕರ ವಿಳಾಸ ಪತ್ತೆ ಮಾಡಿದಾಗ ಈ ಆತ್ಮಹತ್ಯೆಯ ಸುಳಿವು ದೊರಕಿತು.

ನಂತರ ನಂಜನಗೂಡು ನಗರ ಠಾಣೆಯ ಎಸ್ ರವೀಂದ್ರ ಹಾಗೂ ತಿಮ್ಮಯ್ಯ ಮೂರು ತೆಪ್ಪಗಳನ್ನು ತರಿಸಿ ನುರಿತ ಈಜುಗಾರರಿಂದ ಕಪಿಲಾ ನದಿಯನ್ನು ಜಾಲಾಡಿಸಿದ ಪರಿಣಾಮ ಚಂದ್ರು ದೇಹ ಸೇತುವೆಯಿಂದ 1.ಕಿ.ಮಿ ದೂರದಲ್ಲಿ ಅಯ್ಯಪ್ಪ ಸ್ವಾಮಿ ದೇಗುಲಬಳಿ ಪತ್ತೆಯಾಯಿತು.

ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡ ಪಟ್ಟಣದ ಪೋಲಿಸರು ನದಿಯಿಂದ ಶವವನ್ನು ತೆಗೆದು ಮರಣೋತ್ತರ ಪರಿಕ್ಷೆಗೆ ಕಳಿಸಿದರು.

ಜಿ.ಪಂ ಉದ್ಯೋಗಿ ಪತ್ನಿ ಭಾಗ್ಯ ಹಾಗೂ ಮಕ್ಕಳಾದ ಮನೋಜ ಪಾಟೀಲ್ ಹಾಗೂ ಭಾನುಪ್ರಕಾಶರನ್ನು ಅಗಲಿದ ಮಂಜು ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯದಾಗಿದೆ.

ಆಂದೋಲನ ಡೆಸ್ಕ್

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

48 mins ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

3 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

11 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

13 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

14 hours ago