ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಶುರುವಾಗಿದ್ದು, 130ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ.
ಕಳೆದ ಸೋಮವಾರದಿಂದ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾಕಾನೆಗಳಾದ ಮಹೇಂದ್ರ, ಭೀಮ, ರೋಹಿತ ಆನೆಗಳ ಮೂಲಕ ಹುಲಿಯನ್ನು ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಪಣ ತೊಟ್ಟಿದ್ದಾರೆ.
ಹುಲಿ ಸೆರೆಗೆ ಬೋನು ಅಳವಡಿಸಲಾಗಿದ್ದು, 130ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ.
ಇದನ್ನೂ ಓದಿ:-ಟಿ.ನರಸೀಪುರ| ಆಸ್ತಿಗಾಗಿ ಸಹೋದರಿಯರಿಂದ ಕಿರುಕುಳ: ಸಹೋದರ ಆತ್ಮಹತ್ಯೆ
ಇನ್ನು ಜಮೀನಿನಲ್ಲಿ ಹಸುಗಳನ್ನು ಮೇಯಿಸುವ ವೇಳೆ ಹಠಾತ್ ದಾಳಿ ನಡೆಸಿದ ಹುಲಿಯು ರೈತ ರಾಜಶೇಖರಮೂರ್ತಿ ಎಂಬುವವರನ್ನು ಬಲಿಪಡೆದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ಮೇರೆಗೆ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…