ಮೈಸೂರು

ಮೈಸೂರು | ಗನ್‌ ಹಿಡಿದು ರೀಲ್ಸ್‌ , ಖಾಕಿ ಗ್ರೀಲ್‌

ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್‌ ಹಿಡಿದು, ಸರ್ಕಾರಿ ಕಾರು ಬಳಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.

ನಗರದ ಟಿ.ಕೆ ಬಡಾವಣೆಯ ವಿನೋದ ಎಂಬ ಯುವಕ ಗನ್‌ ಹಿಡಿದು ವೀಡಿಯೋ ಮಾಡಿದ್ದಾನೆ. ಈತ ಜ್ಯೂವೆಲರಿ ಅಂಗಡಿಯೊಬ್ಬರ ಮಗ ಎನ್ನಲಾಗಿದೆ. ಗನ್‌ ಹಿಡಿದು ಸರ್ಕಾರಿ ಕಾರಿನಲ್ಲಿ ವೀಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾನೆ. ಇದೀಗ ಅದು ಎಲ್ಲೆಡೆ ವೈರಲ್‌ ಆಗಿದೆ.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸರಸ್ವತಿಪುರಂ ಹಾಗೂ ಕೃಷ್ಣರಾಜ ಸಂಚಾರ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಇದು ಹಳೆಯ ವಿಡಿಯೋ ಎಂದು ಮಾಹಿತಿ ನೀಡಿದ್ದಾನೆ.

ಅಲ್ಲದೇ, ತಾನು ಹಿಡಿದಿರುವುದು ಅಸಲಿ ಗನ್‌ ಅಲ್ಲ, ಅದು ಪಟಾಕಿ ಗನ್‌, ರೀಲ್ಸ್‌ಗಾಗಿ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಸರ್ಕಾರಿ ವಾಹನ ಯಾವುದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…

26 mins ago

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…

40 mins ago

ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

44 mins ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

53 mins ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

1 hour ago

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

2 hours ago