ಮೈಸೂರು

ಮೈಸೂರು ಸ್ವಚ್ಛತಾ ರಾಯಭಾರಿಯಾಗಿ ಮಂಡ್ಯ ರಮೇಶ್ ಆಯ್ಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಸ್ವಚ್ಛತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ.

ಮೈಸೂರು ನಗರ 2015, 2016ರಲ್ಲಿ ಸತತ ಎರಡು ಬಾರಿ ದೇಶದ ನಂ.1 ಸ್ವಚ್ಛ ನಗರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದರೆ, ನಂತರದ ವರ್ಷಗಳಲ್ಲಿ ಮೈಸೂರಿಗೆ ಮೊದಲ ಸ್ಥಾನ ಸಿಕ್ಕಿಲ್ಲ. 2021ನೇ ಸಾಲಿನ ಸ್ವಚ್ಛ ನಗರಗಳ ವಿಭಾಗದಲ್ಲಿ 11ನೇ ಸ್ಥಾನಕ್ಕೆ ಜಾರಿತ್ತು. ಈ ಮೂಲಕ ಟಾಪ್‌ 10 ಪಟ್ಟಿಯಿಂದ ಹೊರಬಿತ್ತು. 2022ರಲ್ಲಿ ಸ್ವಚ್ಛ ನಗರ ಸ್ಥಾನದಲ್ಲಿ 8ನೇ ಸ್ಥಾನ ಸಿಕ್ಕಿತ್ತು. ಈಗ ಮತ್ತೆ ನಂಬರ್ 1 ಸ್ಥಾನ ಪಡೆಯಲು ಮೈಸೂರು ಪಾಲಿಕೆ ಪ್ರಯತ್ನ ನಡೆಸುತ್ತಿದೆ.

ಸ್ವಚ್ಛತಾ ರಾಯಭಾರಿ ಆಗಿರುವ ಬಗ್ಗೆ ಮಂಡ್ಯ ರಮೇಶ್ ಅವರು ಮಾತನಾಡಿ, ಮೈಸೂರು ಅಂದ್ರೆ ನಿಮಗೂ ಇಷ್ಟ, ನನಗೂ ಇಷ್ಟ ಎಲ್ಲರಿಗೂ ಇಷ್ಟ. ಮೈಸೂರು ಪರಂಪರೆಯ ಕಾರಣಕ್ಕಾಗಿ, ಅದಕ್ಕಿರುವ ಸ್ವಚ್ಛ ಸುಂದರ ಕಾರಣಕ್ಕಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಮೈಸೂರಿನ ಹೆಸರು ಹೇಳಿದರೆ ಒಮ್ಮೆ ಹುಬ್ಬೇರಿಸುತ್ತಾರೆ. ಎಲ್ಲರೂ ಮೈಸೂರು ನಗರಕ್ಕೆ ಸ್ವಚ್ಛ ನಗರ ಎಂಬ ಮತ ನೀಡಿ ಎಂದು ಕೋರಿದ್ದಾರೆ.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

4 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

8 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

9 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

10 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

10 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

11 hours ago