ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಸ್ವಚ್ಛತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ.
ಮೈಸೂರು ನಗರ 2015, 2016ರಲ್ಲಿ ಸತತ ಎರಡು ಬಾರಿ ದೇಶದ ನಂ.1 ಸ್ವಚ್ಛ ನಗರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದರೆ, ನಂತರದ ವರ್ಷಗಳಲ್ಲಿ ಮೈಸೂರಿಗೆ ಮೊದಲ ಸ್ಥಾನ ಸಿಕ್ಕಿಲ್ಲ. 2021ನೇ ಸಾಲಿನ ಸ್ವಚ್ಛ ನಗರಗಳ ವಿಭಾಗದಲ್ಲಿ 11ನೇ ಸ್ಥಾನಕ್ಕೆ ಜಾರಿತ್ತು. ಈ ಮೂಲಕ ಟಾಪ್ 10 ಪಟ್ಟಿಯಿಂದ ಹೊರಬಿತ್ತು. 2022ರಲ್ಲಿ ಸ್ವಚ್ಛ ನಗರ ಸ್ಥಾನದಲ್ಲಿ 8ನೇ ಸ್ಥಾನ ಸಿಕ್ಕಿತ್ತು. ಈಗ ಮತ್ತೆ ನಂಬರ್ 1 ಸ್ಥಾನ ಪಡೆಯಲು ಮೈಸೂರು ಪಾಲಿಕೆ ಪ್ರಯತ್ನ ನಡೆಸುತ್ತಿದೆ.
ಸ್ವಚ್ಛತಾ ರಾಯಭಾರಿ ಆಗಿರುವ ಬಗ್ಗೆ ಮಂಡ್ಯ ರಮೇಶ್ ಅವರು ಮಾತನಾಡಿ, ಮೈಸೂರು ಅಂದ್ರೆ ನಿಮಗೂ ಇಷ್ಟ, ನನಗೂ ಇಷ್ಟ ಎಲ್ಲರಿಗೂ ಇಷ್ಟ. ಮೈಸೂರು ಪರಂಪರೆಯ ಕಾರಣಕ್ಕಾಗಿ, ಅದಕ್ಕಿರುವ ಸ್ವಚ್ಛ ಸುಂದರ ಕಾರಣಕ್ಕಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಮೈಸೂರಿನ ಹೆಸರು ಹೇಳಿದರೆ ಒಮ್ಮೆ ಹುಬ್ಬೇರಿಸುತ್ತಾರೆ. ಎಲ್ಲರೂ ಮೈಸೂರು ನಗರಕ್ಕೆ ಸ್ವಚ್ಛ ನಗರ ಎಂಬ ಮತ ನೀಡಿ ಎಂದು ಕೋರಿದ್ದಾರೆ.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…