ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಸ್ವಚ್ಛತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ.
ಮೈಸೂರು ನಗರ 2015, 2016ರಲ್ಲಿ ಸತತ ಎರಡು ಬಾರಿ ದೇಶದ ನಂ.1 ಸ್ವಚ್ಛ ನಗರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದರೆ, ನಂತರದ ವರ್ಷಗಳಲ್ಲಿ ಮೈಸೂರಿಗೆ ಮೊದಲ ಸ್ಥಾನ ಸಿಕ್ಕಿಲ್ಲ. 2021ನೇ ಸಾಲಿನ ಸ್ವಚ್ಛ ನಗರಗಳ ವಿಭಾಗದಲ್ಲಿ 11ನೇ ಸ್ಥಾನಕ್ಕೆ ಜಾರಿತ್ತು. ಈ ಮೂಲಕ ಟಾಪ್ 10 ಪಟ್ಟಿಯಿಂದ ಹೊರಬಿತ್ತು. 2022ರಲ್ಲಿ ಸ್ವಚ್ಛ ನಗರ ಸ್ಥಾನದಲ್ಲಿ 8ನೇ ಸ್ಥಾನ ಸಿಕ್ಕಿತ್ತು. ಈಗ ಮತ್ತೆ ನಂಬರ್ 1 ಸ್ಥಾನ ಪಡೆಯಲು ಮೈಸೂರು ಪಾಲಿಕೆ ಪ್ರಯತ್ನ ನಡೆಸುತ್ತಿದೆ.
ಸ್ವಚ್ಛತಾ ರಾಯಭಾರಿ ಆಗಿರುವ ಬಗ್ಗೆ ಮಂಡ್ಯ ರಮೇಶ್ ಅವರು ಮಾತನಾಡಿ, ಮೈಸೂರು ಅಂದ್ರೆ ನಿಮಗೂ ಇಷ್ಟ, ನನಗೂ ಇಷ್ಟ ಎಲ್ಲರಿಗೂ ಇಷ್ಟ. ಮೈಸೂರು ಪರಂಪರೆಯ ಕಾರಣಕ್ಕಾಗಿ, ಅದಕ್ಕಿರುವ ಸ್ವಚ್ಛ ಸುಂದರ ಕಾರಣಕ್ಕಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಮೈಸೂರಿನ ಹೆಸರು ಹೇಳಿದರೆ ಒಮ್ಮೆ ಹುಬ್ಬೇರಿಸುತ್ತಾರೆ. ಎಲ್ಲರೂ ಮೈಸೂರು ನಗರಕ್ಕೆ ಸ್ವಚ್ಛ ನಗರ ಎಂಬ ಮತ ನೀಡಿ ಎಂದು ಕೋರಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…