ಮೈಸೂರು

ಮಂಡ್ಯದ ಪಾಲಿನ ಕಾವೇರಿ ತ.ನಾಡು ಪಾಲು: ಎಚ್‌ಡಿಕೆ

ಕೆ.ಆರ್.ಪೇಟೆ: ಈ ನಾಡಿನ ನೀರಾವರಿ ಯೋಜನೆಗಳಿಗೆ ಶಾಶ್ವತ ಪರಿಹಾರ ರೂಪಿಸುವುದು ನನ್ನ ಉದ್ದೇಶವಾಗಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಜಾ.ದಳ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್. ಡಿ.ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಪುರಸಭೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನತೆ ಅವಕಾಶ ನೀಡಬೇಕು. ಕಾಂಗ್ರೆಸ್ ಸರ್ಕಾರವು ಕೃಷ್ಣರಾಜಸಾಗರ ಜಲಾಶಯ ದಿಂದ ವಿಸಿ ನಾಲೆಗಳಿಗೆ ಹರಿಯುತ್ತಿದ್ದ ನೀರು ನಿಲ್ಲಿಸಿ ರೈತರ ಬೆಳೆ ಒಣಗಲು ಕಾರಣವಾಗಿದೆ. ಮಂಡ್ಯ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸಿದೆ ಎಂದರು.

ದಲಿತರ ಅಭಿವೃದ್ಧಿಯ 11 ಸಾವಿರ ಕೋಟಿ ರೂ. ಗ್ಯಾರಂಟಿಗೆ ಬಳಕೆ: ಜನತಾದಳದ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಶಿಕ್ಷಣ ಕ್ರಾಂತಿ, ವಿದ್ಯುತ್ ಕ್ರಾಂತಿ, ನೀರಾವರಿ ಕ್ರಾಂತಿ ಮಾಡಿ ಜಿಲ್ಲೆಯ ರೈತರ ಜನಮನದಲ್ಲಿ ನೆಲೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ಜನತೆ ನಿಮ್ಮ ಮನೆ ಮಗನ ರೀತಿ ನನ್ನನ್ನು ಸ್ವೀಕಾರ ಮಾಡಿದ್ದೀರಿ ಎಂಬುದು ಇಲ್ಲಿ ಸೇರಿರುವ ಸಾಗರೋಪಾದಿಯ ಜನರನ್ನು ನೋಡಿದರೆ ತಿಳಿಯುತ್ತದೆ ಎಂದು ಹೇಳಿದರು.

2006ರಲ್ಲಿ ಲಾಟರಿ ಲಾಬಿ, ಸಾರಾಯಿ ಲಾಬಿಗೆ ಮಣಿಯದೇ ಬಡವರ ಹಿತದೃಷ್ಟಿಯಿಂದ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿದೆ. ರೈತರ ನೆಮ್ಮದಿಗಾಗಿ ಸಂಪೂರ್ಣ ಸಾಲ ಮನ್ನಾ ಮಾಡಿದೆ ಆದರೆ ಕಾಂಗ್ರೆಸ್ ಸರ್ಕಾರ ದಲಿತರಿಗೆ ಮೀಸಲಿಟ್ಟ 11ಸಾವಿರ ಕೋಟಿ ರೂ. ಅನುದಾನವನ್ನು 5 ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವ ಮೂಲಕ ದಲಿತರಿಗೆ ಅನ್ಯಾಯ ಮಾಡಿದೆ. 1951 ಮತ್ತು 1952ರ ಲೋಕಸಭಾ ಚುನಾವಣೆಗಳಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಬೇಕು ಎಂದು ಕೋರಿದರು.

35 ವರ್ಷಗಳಿಂದ ಮಂಡ್ಯ ಜಿಲ್ಲೆಯ ಜನತೆ ನಾನು ಸೂಚಿಸಿದ ಜಾ.ದಳ ಪಕ್ಷದ ಅಭ್ಯರ್ಥಿಗಳಿಗೆ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿದ್ದೀರಿ, ಇದೇ ಮೊದಲ ಬಾರಿಗೆ ನಾನೇ ನೇರವಾಗಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಜಾ.ದಳ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ನನಗೆ – ಹೆಚ್ಚು ಮತ ನೀಡಿ ನಿಮ್ಮ ಸೇವೆಗೆ ಅವಕಾಶ ಕಲ್ಪಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

22 mins ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

24 mins ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

26 mins ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

28 mins ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

31 mins ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

34 mins ago