Mantra Mangalya
ಮೈಸೂರು : ಜಿಲ್ಲೆಯ ನಂಜನಗೂಡಿನ ಪ್ರೇಮಿಗಳಾದ ಎಂ. ಸಂತೋಷ್ ಹಾಗೂ ಸಿ. ರಂಜಿತಾ ಅವರ ವಿವಾಹವು ಮಂತ್ರ ಮಾಂಗಲ್ಯದ (Mantra Mangalya) ಮೂಲಕ ಸರಳವಾಗಿ ನಡೆಯಿತು.
ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಎಂ. ಸಂತೋಷ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಸಿ.ರಂಜಿತಾ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದಾರೆ.
ಈ ಜೋಡಿಗಳು ಅಂತರ ಜಾತಿಯಾಗಿದ್ದರೂ ಎರಡು ಕುಟುಂಬದ ಒಪ್ಪಿಗೆ ಪಡೆದು ಮಂತ್ರ ಮಾಂಗಲ್ಯ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿವೆ. ಇದು ಮಾದರಿ ಎಂಬಂತೆ ನಡೆದಿರುವುದು ವಿಶೇಷ..
ಮಾನವ ಬಂಧುತ್ವ ವೇದಿಕೆಯ ಮುಖ್ಯಸ್ಥ ಉಗ್ರ ನರಸಿಂಹೆಗೌಡ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹ ಸಂಹಿತೆ ಬೋಧಿಸಿದರು. ಇದೇ ಸಂದರ್ಭದಲ್ಲಿ ಅನೇಕ ಪ್ರಗತಿಪರ ಚಿಂತಕರು ಮದುವೆಯಲ್ಲಿ ಭಾಗಿಯಾಗಿದ್ದರು.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…