ಮೈಸೂರು

ಮನುಜ ಮತ, ವಿಶ್ವಪಥದೆಡಗೆ ಯುವಸಮೂಹ ಸಾಗಲಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು/ಟಿ.ನರಸೀಪುರ:  ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ  ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಯಾಚೇನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ರಾಷ್ಟ್ರಕವಿ ಕುವೆಂಪು ರವರ ಚಿತಾಭಸ್ಮ ಸ್ಮಾರಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು‌.

ಬುದ್ಧ, ಬಸವ, ಅಂಬೇಡ್ಕರ್ ಸಾಲಿನಲ್ಲಿ ಮೇರು ವ್ಯಕ್ತಿತ್ವವುಳ್ಳ ಕುವೆಂಪು ಅವರನ್ನು ನೋಡಬೇಕಿದ್ದು ಕುವೆಂಪು ಅವರ ಚಿಂತನೆ ಎಲ್ಲರಿಗೂ ಅಗತ್ಯವಿದೆ ಎಂದು ಹೇಳಿದರು.

ವೈಚಾರಿಕತೆ, ವೈಜ್ಞಾನಿಕತೆ ನೆಲೆಗಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ರಾಷ್ಟ್ರಕವಿ ಕುವೆಂಪು ಅವರ ಚಿತಾಭಸ್ಮ ಸ್ಮಾರಕ ಭವನದಲ್ಲಿ ಉತ್ಕೃಷ್ಟ ಚಿಂತನೆಗಳು ಹಾಗೂ ಕಾರ್ಯಕ್ರಮಗಳು ಜರುಗಲಿ. ಈ ಭಾಗದಿಂದ ರಾಜ್ಯದ ಉದ್ದಗಲಕ್ಕೂ ಪಸರಿಸಲಿ ಎಂದು ನುಡಿದರು.

ಭೌದ್ಧಿಕವಾಗಿ ನಾವು ಎಚ್ಚರವಾಗದಿದ್ದರೆ ಶ್ರೇಣಿಕೃತ ವ್ವಸಸ್ಥೆಯಲ್ಲಿ ಪಾತಾಳಕ್ಕೆ ತಳ್ಳಲಿದ್ದಾರೆ. ಕುವೆಂಪು ಅವರ ವಿಚಾರಧಾರೆ ಜೀವಂತ ಉಳಿಸಿ ಶೂದ್ರ ಸಮಾಜವನ್ನು ಕತ್ತಲಿನಿಂದ ಬೆಳಕಿಗೆ ಕರೆತಂದು ವಿಶ್ವಮಾನವರನ್ನು ಸೃಷ್ಟಿ ಮಾಡುವ ಮೂಲಕ ಮನುಷ್ಶ ಸಮಾಜ ಉಳಿಸಲು ಈ ಕ್ಷೇತ್ರ ಪ್ರೇರಣೆಯಾಗಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ರೀಯಾಯಿತಿ ದರದಲ್ಲಿ ಬಿತ್ತನೆ ಭತ್ತವನ್ನು ಸಾಂಕೇತಿಕವಾಗಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್, ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್, ಯಾಚೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ಶೇಖರ್, ಸರೋಜಮ್ಮ, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ, ಮೈಮುಲ್ ನಿರ್ದೇಶಕ ಚಲುವರಾಜು, ರಾಮಕೃಷ್ಣ ಸೇವಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ನಾಗಾಂದನಾಥಸ್ವಾಮೀಜಿ, ಸ್ಮಾರಕಕ್ಕೆ ನಿವೇಶನ ದಾನ ಮಾಡಿದ ವೈ.ಎನ್.ಶಂಕರೇಗೌಡ, ಹಿರಿಯ ಮುಖಂಡರಾದ ವಜ್ರೇಗೌಡ, ಮುಖಂಡರಾದ ಮುನವರ್ ಪಾಷ, ವೀಣಾ ಶಿವಕುಮಾರ್, ಚನ್ನಕೇಶವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago