ಮೈಸೂರು

ಮನುಜ ಮತ, ವಿಶ್ವಪಥದೆಡಗೆ ಯುವಸಮೂಹ ಸಾಗಲಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು/ಟಿ.ನರಸೀಪುರ:  ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ  ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಯಾಚೇನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ರಾಷ್ಟ್ರಕವಿ ಕುವೆಂಪು ರವರ ಚಿತಾಭಸ್ಮ ಸ್ಮಾರಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು‌.

ಬುದ್ಧ, ಬಸವ, ಅಂಬೇಡ್ಕರ್ ಸಾಲಿನಲ್ಲಿ ಮೇರು ವ್ಯಕ್ತಿತ್ವವುಳ್ಳ ಕುವೆಂಪು ಅವರನ್ನು ನೋಡಬೇಕಿದ್ದು ಕುವೆಂಪು ಅವರ ಚಿಂತನೆ ಎಲ್ಲರಿಗೂ ಅಗತ್ಯವಿದೆ ಎಂದು ಹೇಳಿದರು.

ವೈಚಾರಿಕತೆ, ವೈಜ್ಞಾನಿಕತೆ ನೆಲೆಗಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ರಾಷ್ಟ್ರಕವಿ ಕುವೆಂಪು ಅವರ ಚಿತಾಭಸ್ಮ ಸ್ಮಾರಕ ಭವನದಲ್ಲಿ ಉತ್ಕೃಷ್ಟ ಚಿಂತನೆಗಳು ಹಾಗೂ ಕಾರ್ಯಕ್ರಮಗಳು ಜರುಗಲಿ. ಈ ಭಾಗದಿಂದ ರಾಜ್ಯದ ಉದ್ದಗಲಕ್ಕೂ ಪಸರಿಸಲಿ ಎಂದು ನುಡಿದರು.

ಭೌದ್ಧಿಕವಾಗಿ ನಾವು ಎಚ್ಚರವಾಗದಿದ್ದರೆ ಶ್ರೇಣಿಕೃತ ವ್ವಸಸ್ಥೆಯಲ್ಲಿ ಪಾತಾಳಕ್ಕೆ ತಳ್ಳಲಿದ್ದಾರೆ. ಕುವೆಂಪು ಅವರ ವಿಚಾರಧಾರೆ ಜೀವಂತ ಉಳಿಸಿ ಶೂದ್ರ ಸಮಾಜವನ್ನು ಕತ್ತಲಿನಿಂದ ಬೆಳಕಿಗೆ ಕರೆತಂದು ವಿಶ್ವಮಾನವರನ್ನು ಸೃಷ್ಟಿ ಮಾಡುವ ಮೂಲಕ ಮನುಷ್ಶ ಸಮಾಜ ಉಳಿಸಲು ಈ ಕ್ಷೇತ್ರ ಪ್ರೇರಣೆಯಾಗಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ರೀಯಾಯಿತಿ ದರದಲ್ಲಿ ಬಿತ್ತನೆ ಭತ್ತವನ್ನು ಸಾಂಕೇತಿಕವಾಗಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್, ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್, ಯಾಚೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ಶೇಖರ್, ಸರೋಜಮ್ಮ, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ, ಮೈಮುಲ್ ನಿರ್ದೇಶಕ ಚಲುವರಾಜು, ರಾಮಕೃಷ್ಣ ಸೇವಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ನಾಗಾಂದನಾಥಸ್ವಾಮೀಜಿ, ಸ್ಮಾರಕಕ್ಕೆ ನಿವೇಶನ ದಾನ ಮಾಡಿದ ವೈ.ಎನ್.ಶಂಕರೇಗೌಡ, ಹಿರಿಯ ಮುಖಂಡರಾದ ವಜ್ರೇಗೌಡ, ಮುಖಂಡರಾದ ಮುನವರ್ ಪಾಷ, ವೀಣಾ ಶಿವಕುಮಾರ್, ಚನ್ನಕೇಶವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

3 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

4 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

4 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

4 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

5 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

5 hours ago