ಮೈಸೂರು/ಟಿ.ನರಸೀಪುರ: ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಯಾಚೇನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ರಾಷ್ಟ್ರಕವಿ ಕುವೆಂಪು ರವರ ಚಿತಾಭಸ್ಮ ಸ್ಮಾರಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಬುದ್ಧ, ಬಸವ, ಅಂಬೇಡ್ಕರ್ ಸಾಲಿನಲ್ಲಿ ಮೇರು ವ್ಯಕ್ತಿತ್ವವುಳ್ಳ ಕುವೆಂಪು ಅವರನ್ನು ನೋಡಬೇಕಿದ್ದು ಕುವೆಂಪು ಅವರ ಚಿಂತನೆ ಎಲ್ಲರಿಗೂ ಅಗತ್ಯವಿದೆ ಎಂದು ಹೇಳಿದರು.
ವೈಚಾರಿಕತೆ, ವೈಜ್ಞಾನಿಕತೆ ನೆಲೆಗಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ರಾಷ್ಟ್ರಕವಿ ಕುವೆಂಪು ಅವರ ಚಿತಾಭಸ್ಮ ಸ್ಮಾರಕ ಭವನದಲ್ಲಿ ಉತ್ಕೃಷ್ಟ ಚಿಂತನೆಗಳು ಹಾಗೂ ಕಾರ್ಯಕ್ರಮಗಳು ಜರುಗಲಿ. ಈ ಭಾಗದಿಂದ ರಾಜ್ಯದ ಉದ್ದಗಲಕ್ಕೂ ಪಸರಿಸಲಿ ಎಂದು ನುಡಿದರು.
ಭೌದ್ಧಿಕವಾಗಿ ನಾವು ಎಚ್ಚರವಾಗದಿದ್ದರೆ ಶ್ರೇಣಿಕೃತ ವ್ವಸಸ್ಥೆಯಲ್ಲಿ ಪಾತಾಳಕ್ಕೆ ತಳ್ಳಲಿದ್ದಾರೆ. ಕುವೆಂಪು ಅವರ ವಿಚಾರಧಾರೆ ಜೀವಂತ ಉಳಿಸಿ ಶೂದ್ರ ಸಮಾಜವನ್ನು ಕತ್ತಲಿನಿಂದ ಬೆಳಕಿಗೆ ಕರೆತಂದು ವಿಶ್ವಮಾನವರನ್ನು ಸೃಷ್ಟಿ ಮಾಡುವ ಮೂಲಕ ಮನುಷ್ಶ ಸಮಾಜ ಉಳಿಸಲು ಈ ಕ್ಷೇತ್ರ ಪ್ರೇರಣೆಯಾಗಲಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ರೀಯಾಯಿತಿ ದರದಲ್ಲಿ ಬಿತ್ತನೆ ಭತ್ತವನ್ನು ಸಾಂಕೇತಿಕವಾಗಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್, ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್, ಯಾಚೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ಶೇಖರ್, ಸರೋಜಮ್ಮ, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ, ಮೈಮುಲ್ ನಿರ್ದೇಶಕ ಚಲುವರಾಜು, ರಾಮಕೃಷ್ಣ ಸೇವಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ನಾಗಾಂದನಾಥಸ್ವಾಮೀಜಿ, ಸ್ಮಾರಕಕ್ಕೆ ನಿವೇಶನ ದಾನ ಮಾಡಿದ ವೈ.ಎನ್.ಶಂಕರೇಗೌಡ, ಹಿರಿಯ ಮುಖಂಡರಾದ ವಜ್ರೇಗೌಡ, ಮುಖಂಡರಾದ ಮುನವರ್ ಪಾಷ, ವೀಣಾ ಶಿವಕುಮಾರ್, ಚನ್ನಕೇಶವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…