ಮೈಸೂರು

ದೇವಸ್ಥಾನದಲ್ಲಿ ಗೊಬ್ಬರ ತಯಾರಿಕೆ

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು

ಮೈಸೂರು: ದೇವಸ್ಥಾನದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಕಸದ ಬುಟ್ಟಿಗೆ ಹಾಕುವುದನ್ನು ಹಾಗೂ ಇಲ್ಲವಾದರೆ ಹೊರಗಡೆ ಸುರಿಯುವುದನ್ನು ನಾವು ನೋಡಿರುತ್ತೇವೆ ಆದರೆ ಮೈಸೂರು ಜಿಲ್ಲೆಯ ಪುರಾತನ ದೇವಾಲಯದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಗಿಡಕ್ಕೆ ಹಾಕುವ ಗೊಬ್ಬರ ವಾಗಿ ತಯಾರಿಕೆ ಮಾಡುತ್ತಿದ್ದಾರೆ. ಬೇಡವಾದ ವಸ್ತುವನ್ನು ಸಹ ಉಪಯೋಗ ಬರುವ ರೀತಿಯಲ್ಲಿ ಬಳಕೆ ಮಾಡಿ ಕೊಳ್ಳುತ್ತಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಪುರಾತನ ದೇವಸ್ಥಾನ ಹಾಗೂ ದಕ್ಷಿಣ ಕಾಶಿ ನಂಜುಂಡೇಶ್ವರನ ಮೂಲ ಸ್ಥಳವೆಂದೇ ಪ್ರಸಿದ್ಧಿಯನ್ನು ಪಡೆದಿರುವ ದೇವಾಲಯವಾದ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಬೇಡವಾದ ವಸ್ತುವನ್ನು ಸಹ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಎರಡು ವರ್ಷಗಳಿಂದ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಹಾಗೂ ಈ ವ್ಯವಸ್ಥೆಯನ್ನು ಐಟಿಸಿ ಕಂಪನಿಯು ಎರಡು ವರ್ಷದ ಹಿಂದೆ ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂದು ವಿವರಣೆ ನೀಡಿ ದೇವಸ್ಥಾನಕ್ಕೆ ಎರಡು ಡ್ರಮ್ ಅನ್ನು ಅಳವಡಿಸಿದ್ದಾರೆ. ಹೇಗೆ ಗೊಬ್ಬರವಾಗಿ ತಯಾರು ಮಾಡಬೇಕು ಎಂದು ಸಹ ಚಾರ್ಟ್ ದೇವಸ್ಥಾನದ ಗೋಡೆ ಮೇಲೆ ಅಳವಡಿಕೆ ಮಾಡಿದ್ದಾರೆ.

ಚಾರ್ಟ್ ಅಲ್ಲಿ ಹಂತ ಹಂತವಾಗಿ ವಿವರಣೆ:

ಹಂತ 1. ಮೊದಲು ದೇವಾಲಯದಿಂದ ಬರುವಂತ ಕೊಳೆಯುವ ತ್ಯಾಜ್ಯವನ್ನು ಸಂಗ್ರಹಿಸಬೇಕು.

ಹಂತ 2: ನಂತರ ಸಂಗ್ರಹಿಸಿದ ತ್ಯಾಜ್ಯವನ್ನು ಗೊಬ್ಬರ ತಯಾರಿಸುವ ಕಾಂಪೋಸ್ಟರ್ ಒಳಗೆ ಹಾಕಬೇಕು.

ಹಂತ 3 : ಎಲ್ಲವನ್ನು ಹಾಕಿದ ನಂತರ ಇನಾಕ್ಯುಲಮ್ ಅಥವಾ ಹುಳಿ ಮೊಸರನ್ನು ಇದಕ್ಕೆ ಸೇರಿಸಿ ಸಮವಾಗಿ ಹರಡಬೇಕು.

1. ಈ ರೀತಿ ಪ್ರತಿಭಾರಿ ದೇವಾಲಯದಿಂದ ಬಂದ ಹೂಗಳು ಹಾಗು ಎಲೆಗಳನ್ನು ಕಾಂಪೋಸ್ಟರ್ ಒಳಗೆ ಹಾಕುವ ಮೂಲಕ ಗೊಬ್ಬರವನ್ನು ತಯಾರಿಸಬಹುದು.

2. ಹೀಗೆ ದೊರೆತಂತ ಗೊಬ್ಬರವನ್ನು ದೇವಾಲಯದ ಉದ್ಯಾನದಲ್ಲಿ ಬಳಸಬಹುದು ಮತ್ತು ಭಕ್ತಾದಿಗಳಿಗೆ ಮಾರಾಟ ಮಾಡಬಹುದು

3. ಹೂವಿನ ಹಾರದಲ್ಲಿ ಬರುವ ದಾರವನ್ನು ಬಿಡಿಸಿ ಕಾಂಪೋಸ್ಟರ್ ಒಳಗೆ ಹಾಕಬೇಕು ಹಾಗು ತ್ಯಾಜ್ಯ ಹಸಿ ಇರದಂತೆ ಮರದ ಒಟ್ಟು ಅಥವಾ ಬೂದಿಯನ್ನು ಸೇರಿಸಿ ಹಾಗೂ ಶುಚಿತ್ವ ದೈವತ್ವ ಎಂದು ವಿವರಣೆ ನೀಡಿದ್ದಾರೆ.

ಸದ್ಯ ಈ ದೇವಸ್ಥಾನದಲ್ಲಿ ಹೂಗಳನ್ನು ಗಿಡಗಳಿಗೆ ಎಲ್ಲಂದರಲ್ಲಿ ಬಿಸಾಡುತ್ತಿದ್ದರು. ಆದರೆ ಈಗ ಒಣಗಿದ ಹೂವು ಗಳನ್ನು ಡ್ರಮ್ ಗೆ ಹಾಕಿ ಅಲ್ಲಿಗೆ ಹೂವು ಮಣ್ಣು ಮರದ ಹೊಟ್ಟು ಹಾಗೂ ಬೂದಿಯನ್ನು ಹಾಕಿ ಗೊಬ್ಬರ ತಯಾರಿಸಿ ಗಿಡಗಳಿಗೆ ಹಾಕುತ್ತಿದ್ದಾರೆ. ಉಪಯೋಗವನ್ನು ಸಹ ಪಡೆದುಕೊಳ್ಳುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

14 hours ago