ಮೈಸೂರು : ಭಾರತದಲ್ಲಿ ಹುಟ್ಟಿದ ಬೌದ್ಧ ಧರ್ಮ ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ಲಿ ಬೆಳೆಯಲು ಮನುವಾದಿಗಳು ಬಿಡಲಿಲ್ಲ ಎಂದು ಸಚಿವ ಸತೀಸ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಬೌದ್ಧ ಧರ್ಮ ಕ್ರಿ.ಪೂ ದಲ್ಲಿ ಅಸ್ತಿತ್ವಕ್ಕೆ ಬಂದು ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ ಬೌದ್ಧ ಧರ್ಮ ಬೆಳೆಯಲು ಮನುವಾದಿಗಳು ಬಿಡಲಿಲ್ಲ, ಬೌದ್ಧ ಧರ್ಮ ಬೆಳೆಯುವುದನ್ನು ತಡೆದರು ಎಂದು ಆರೋಪಿಸಿದ್ದಾರೆ.
ಬುದ್ಧ ಅಂಬೇಡ್ಕರ್ ಚಿಂತನೆ ಹೆಚ್ಚು ಪ್ರಚುರಪಡಿಸಬೇಕು
ಬುದ್ಧ ಹಾಗೂ ಅಂಬೇಡ್ಕರ್ ಚಿಂತನೆಗಳನ್ನು ಹೆಚ್ಚು ಪ್ರಚುರಪಡಿಸಬೇಕು. ಈ ಬೌದ್ಧ ಮಹಾ ಸಮ್ಮೇಳನ ಕೇವಲ ದಲಿತರು, ಬೌದ್ಧರಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗಿಯಾಗಿ ಸಾಮಾಜಿಕ ನ್ಯಾಯದ ಸಂದೇಶವನ್ನು ಎಲ್ಲೆಡೆಗೆ ತಲುಪಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ:-ರಾಜ್ಯಾದ್ಯಂತ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ : ಯಲ್ಲೊ ಅಲರ್ಟ್
ಡಾ.ಬಿಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿ 70 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಬೌದ್ಧ ಮಹಾ ಸಮ್ಮೇಳನ ಗರ್ಜಿಸಿದ್ದು, ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ, ಬೌದ್ಧ ಚಿಂತನೆಗಳ ಪ್ರಸಾರಕ್ಕೆ ಒತ್ತು ನೀಡಿದ್ದಾರೆ.
ಸಮ್ಮೇಳನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಹೆಚ್ಸಿ ಮಹದೇವಪ್ಪ ಸೇರಿದಂತೆ ಶಾಸಕರಾದ ಎಆರ್ ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ನರೇಂದ್ರಸ್ವಾಮಿ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ್ ಎಂಎಲ್ಸಿ ಡಾ ಡಿ ತಿಮ್ಮಯ್ಯ, ಡಾ ಯತೀಂದ್ರ ಇತರ ಪ್ರಮುಖರು ಭಾಗಿಯಾಗಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…