ಮೈಸೂರು

ಬಿಜೆಪಿಯಿಂದ ಪ್ರಜಾಪ್ರಭುತ್ವ ಕಗ್ಗೊಲೆ: ಡಾ.ಯತೀಂದ್ರ ಸಿದ್ದರಾಮಯ್ಯ

ಹುಣಸೂರು: ‘ದೇಶದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ವಿವಿಧ ಸರ್ಕಾರಿ ಸವಲತ್ತು ಪಡೆದ ಫಲಾನುಭವಿಗಳು ಆಯೋಜಿಸಿದ್ದ ಶಾಸಕ ಎಚ್‌.ಪಿ.ಮಂಜುನಾಥ್ ಅವರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನಾವಳಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಾಗದೆ ಅವರ ವಿರುದ್ಧ ಸ್ವಪಕ್ಷೀಯ ಸದಸ್ಯರಿಂದಲೇ ನಿಂದನೆ ಪ್ರಕರಣ ದಾಖಲಿಸಿ ಸಂಸತ್ತಿನಿಂದ ಅನರ್ಹಗೊಳಿಸಿ ಏಕಚಕ್ರಾಧಿಪತ್ಯ ಮೆರೆದಿದ್ದಾರೆ’ ಎಂದು ದೂರಿದರು.
ಎಚ್.ಡಿ.ಕೋಟೆ ಶಾಸಕ ಅನಿಲ್ ಕುಮಾರ್ ಮಾತನಾಡಿ, ‘ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದ ನನ್ನ ತಂದೆ ಚಿಕ್ಕಮಾದು ಅವರ ಕೊಡುಗೆಯನ್ನು ಎಚ್.ಡಿ.ಕುಮಾರಸ್ವಾಮಿ ಸ್ಮರಿಸದೆ, ನನ್ನ ರಾಜಕೀಯ ಬೆಳವಣಿಗೆಯ ಬಾಗಿಲು ಮುಚ್ಚಿದ್ದರು. ಆದರೆ, ಕಾಂಗ್ರೆಸ್‌ ನನ್ನ ಬೆಳವಣಿಗೆಗೆ ಸಹಕಾರ ನೀಡಿತು’ ಎಂದರು.
ಶಾಸಕ ಎಚ್‌.ಪಿ.ಮಂಜುನಾಥ್ ಮಾತನಾಡಿ, ‘ಮೂರು ಬಾರಿ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಬಾರಿಯೂ ಮತದಾರರು ನನ್ನನ್ನು ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಕ್ಷೇತ್ರಕ್ಕೆ ಅನುದಾನ ಸಿಕ್ಕಿಲ್ಲ’ ಎಂದು ದೂರಿದರು.
‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲಾಗದೆ ಸ್ಥಳೀಯರ ವಿರೋಧ ಕಟ್ಟಿಕೊಂಡಿರುವ ಜಿ.ಟಿ.ದೇವೇಗೌಡ ಅವರು, ಹುಣಸೂರು ಕ್ಷೇತ್ರದಲ್ಲಿ ತಮ್ಮ ವಿರುದ್ಧ ತೊಡೆ ತಟ್ಟುತ್ತಿದ್ದಾರೆ. ಅವರ ಕ್ಷೇತ್ರದಲ್ಲಿ ತೊಡೆ ತಟ್ಟಿ ಗೆಲ್ಲುವ ಕನಸು ಕಟ್ಟಿಕೊಳ್ಳಲಿ. ಹೊರಗಿನಿಂದ ಬಂದವರು ಮನೆ ಮಗನ ವಿರುದ್ಧ ಧ್ವನಿ ಎತ್ತಲು ಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಅವರು ಹೇಳಿದರು.

lokesh

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

13 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

14 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

15 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

15 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

16 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

17 hours ago