ಮೈಸೂರು

ಬಿಜೆಪಿಯಿಂದ ಪ್ರಜಾಪ್ರಭುತ್ವ ಕಗ್ಗೊಲೆ: ಡಾ.ಯತೀಂದ್ರ ಸಿದ್ದರಾಮಯ್ಯ

ಹುಣಸೂರು: ‘ದೇಶದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ವಿವಿಧ ಸರ್ಕಾರಿ ಸವಲತ್ತು ಪಡೆದ ಫಲಾನುಭವಿಗಳು ಆಯೋಜಿಸಿದ್ದ ಶಾಸಕ ಎಚ್‌.ಪಿ.ಮಂಜುನಾಥ್ ಅವರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನಾವಳಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಾಗದೆ ಅವರ ವಿರುದ್ಧ ಸ್ವಪಕ್ಷೀಯ ಸದಸ್ಯರಿಂದಲೇ ನಿಂದನೆ ಪ್ರಕರಣ ದಾಖಲಿಸಿ ಸಂಸತ್ತಿನಿಂದ ಅನರ್ಹಗೊಳಿಸಿ ಏಕಚಕ್ರಾಧಿಪತ್ಯ ಮೆರೆದಿದ್ದಾರೆ’ ಎಂದು ದೂರಿದರು.
ಎಚ್.ಡಿ.ಕೋಟೆ ಶಾಸಕ ಅನಿಲ್ ಕುಮಾರ್ ಮಾತನಾಡಿ, ‘ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದ ನನ್ನ ತಂದೆ ಚಿಕ್ಕಮಾದು ಅವರ ಕೊಡುಗೆಯನ್ನು ಎಚ್.ಡಿ.ಕುಮಾರಸ್ವಾಮಿ ಸ್ಮರಿಸದೆ, ನನ್ನ ರಾಜಕೀಯ ಬೆಳವಣಿಗೆಯ ಬಾಗಿಲು ಮುಚ್ಚಿದ್ದರು. ಆದರೆ, ಕಾಂಗ್ರೆಸ್‌ ನನ್ನ ಬೆಳವಣಿಗೆಗೆ ಸಹಕಾರ ನೀಡಿತು’ ಎಂದರು.
ಶಾಸಕ ಎಚ್‌.ಪಿ.ಮಂಜುನಾಥ್ ಮಾತನಾಡಿ, ‘ಮೂರು ಬಾರಿ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಬಾರಿಯೂ ಮತದಾರರು ನನ್ನನ್ನು ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಕ್ಷೇತ್ರಕ್ಕೆ ಅನುದಾನ ಸಿಕ್ಕಿಲ್ಲ’ ಎಂದು ದೂರಿದರು.
‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲಾಗದೆ ಸ್ಥಳೀಯರ ವಿರೋಧ ಕಟ್ಟಿಕೊಂಡಿರುವ ಜಿ.ಟಿ.ದೇವೇಗೌಡ ಅವರು, ಹುಣಸೂರು ಕ್ಷೇತ್ರದಲ್ಲಿ ತಮ್ಮ ವಿರುದ್ಧ ತೊಡೆ ತಟ್ಟುತ್ತಿದ್ದಾರೆ. ಅವರ ಕ್ಷೇತ್ರದಲ್ಲಿ ತೊಡೆ ತಟ್ಟಿ ಗೆಲ್ಲುವ ಕನಸು ಕಟ್ಟಿಕೊಳ್ಳಲಿ. ಹೊರಗಿನಿಂದ ಬಂದವರು ಮನೆ ಮಗನ ವಿರುದ್ಧ ಧ್ವನಿ ಎತ್ತಲು ಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಅವರು ಹೇಳಿದರು.

lokesh

Recent Posts

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 mins ago

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

12 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

13 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

24 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

24 hours ago