ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ.
ಇಂದು (ಡಿಸೆಂಬರ್ 25) ರಾತ್ರಿ ಅರಮನೆಯ ಜಯ ಮಾರ್ತಾಂಡ ಗೇಟ್ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆಗೆ ಸಿಲಿಂಡರ್ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ ಕೆ.ಆರ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಸ್ಫೋಟಕ್ಕೆ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ.
ಬ್ಲಾಸ್ಟ್ ತೀವ್ರತೆಗೆ ಇಬ್ಬರ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಲೂನ್ ಗೆ ಗ್ಯಾಸ್ ತುಂಬುವ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಬೆಂಗಳೂರು ಮೂಲದ ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ. ಇನ್ನು ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ, ಕೋಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ , ರಾಣೆಬೆನ್ನೂರು ಮೂಲದ ಕೊಟ್ರೇಶ್ ಎಂಬುವರಿಗೂ ಗಾಯಗಳಾಗಿದ್ದು, ಸದ್ಯ ಇವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…