ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ.
ಇಂದು (ಡಿಸೆಂಬರ್ 25) ರಾತ್ರಿ ಅರಮನೆಯ ಜಯ ಮಾರ್ತಾಂಡ ಗೇಟ್ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆಗೆ ಸಿಲಿಂಡರ್ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ ಕೆ.ಆರ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಸ್ಫೋಟಕ್ಕೆ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ.
ಬ್ಲಾಸ್ಟ್ ತೀವ್ರತೆಗೆ ಇಬ್ಬರ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಲೂನ್ ಗೆ ಗ್ಯಾಸ್ ತುಂಬುವ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಬೆಂಗಳೂರು ಮೂಲದ ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ. ಇನ್ನು ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ, ಕೋಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ , ರಾಣೆಬೆನ್ನೂರು ಮೂಲದ ಕೊಟ್ರೇಶ್ ಎಂಬುವರಿಗೂ ಗಾಯಗಳಾಗಿದ್ದು, ಸದ್ಯ ಇವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…