ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದು ಸಿಎಂ ಕ್ಷೇತ್ರದಿಂದ ಮೈಕ್ರೋ ಫೈನಾನ್ಸ್ಗಳನ್ನು ತೊಲಗಿಸಬೇಕು ಎಂದು ರೈತ ಸಂಘ ಮತ್ತು ಪ್ರಗತಿಪರ ಸಂಘಟಕರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಗಾರದ ಮುಂದೆ ಜಮಾಯಿಸಿ ಧರಣಿ ನಡೆಸಿದ ಸಂಘಟನಕಾರರು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಹಾಗೂ ದಸಂಸ ಮುಖಂಡರಾದ ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಹೆಚ್ಚಾಗಿದೆ. ಇವರ ಕಿರುಕುಳಕ್ಕೆ ಎದರಿ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಒಂದೇ ರಾತ್ರಿ ಅಂಬಳೆ ಮತ್ತು ಮಲ್ಕುಂಡಿ ಗ್ರಾಮಗಳಲ್ಲಿ ಇಬ್ಬರೂ ಬಲಿಯಾಗಿದ್ದಾರೆ. ನಂಜನಗೂಡಿನ ತಹಶಿಲ್ದಾರ್ ಖಡಕ್ ಎಚ್ಚರಿಕೆ ನೀಡಿದರು ಈ ಫೈನಾನ್ಸ್ಗಳ ಹಾವಳಿ ಇನ್ನೂ ಹೆಚ್ಚಾಗಿದೆ ಎಂದು ದೂರಿದರು.
ಕೂಡಲೇ ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇವರ ಕಿರುಕುಳದಿಂದ ಜೀವ ಕಳೆದುಕೊಂಡಿರುವ ಕುಟುಂಬಗಳಿಗೆ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಬೃಹತ್ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…