ಮೈಸೂರು

ಮೈಕ್ರೋ ಫೈನಾನ್ಸ್‌ ಹಾವಳಿ ತಡೆಗೆ ಆಗ್ರಹಸಿ ಬೃಹತ್‌ ಪ್ರತಿಭಟನೆ

ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದು ಸಿಎಂ ಕ್ಷೇತ್ರದಿಂದ ಮೈಕ್ರೋ ಫೈನಾನ್ಸ್‌ಗಳನ್ನು ತೊಲಗಿಸಬೇಕು ಎಂದು ರೈತ ಸಂಘ ಮತ್ತು ಪ್ರಗತಿಪರ ಸಂಘಟಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಗಾರದ ಮುಂದೆ ಜಮಾಯಿಸಿ ಧರಣಿ ನಡೆಸಿದ ಸಂಘಟನಕಾರರು ಮೈಕ್ರೋ ಫೈನಾನ್ಸ್‌ ಕಂಪನಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್‌ ಹಾಗೂ ದಸಂಸ ಮುಖಂಡರಾದ ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಕಿರುಕುಳ ಹೆಚ್ಚಾಗಿದೆ. ಇವರ ಕಿರುಕುಳಕ್ಕೆ ಎದರಿ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಒಂದೇ ರಾತ್ರಿ ಅಂಬಳೆ ಮತ್ತು ಮಲ್ಕುಂಡಿ ಗ್ರಾಮಗಳಲ್ಲಿ ಇಬ್ಬರೂ ಬಲಿಯಾಗಿದ್ದಾರೆ. ನಂಜನಗೂಡಿನ ತಹಶಿಲ್ದಾರ್‌ ಖಡಕ್‌ ಎಚ್ಚರಿಕೆ ನೀಡಿದರು ಈ ಫೈನಾನ್ಸ್‌ಗಳ ಹಾವಳಿ ಇನ್ನೂ ಹೆಚ್ಚಾಗಿದೆ ಎಂದು ದೂರಿದರು.

ಕೂಡಲೇ ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್‌ ಮಾಲೀಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಇವರ ಕಿರುಕುಳದಿಂದ ಜೀವ ಕಳೆದುಕೊಂಡಿರುವ ಕುಟುಂಬಗಳಿಗೆ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಬೃಹತ್‌ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

 

ಆಂದೋಲನ ಡೆಸ್ಕ್

Recent Posts

ಮಳೆಗಾಲ ಶುರುವಾದರೆ ವಿದ್ಯುತ್ ಸಮಸ್ಯೆ !

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…

3 hours ago

ಕನಿಷ್ಠ ಸೌಲಭ್ಯಗಳೂ ಇಲ್ಲದ ಮಂಡ್ಯ ತಾಲ್ಲೂಕು ಕಚೇರಿ

ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…

3 hours ago

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಅನ್ನದಾತರು

ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…

3 hours ago

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

22 hours ago