ಮೈಸೂರು

ಸಂಸ್ಕೃತಿ ಉಳಿಸುತ್ತಿರುವ ಮಠಗಳು: ಸಂಸದ ಯದುವೀರ್‌

ತಿ.ನರಸೀಪುರ: ತಿ.ನರಸೀಪುರ ತಾಲೂಕು ಅತ್ಯದ್ಬುತವಾದ ಪರಂಪರೆ,ಸಂಸ್ಕೃತಿ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗು ರಾಜ ವಂಶಸ್ಥರಾದ ಯದುವೀರ್ ಶ್ರೀ ಕಂಠದತ್ತ ಚಾಮರಾಜ ಒಡೆಯರ್ ಹೇಳಿದರು.

ತಾಲೂಕಿನ ಬಿಲಿಗೆರೆಹುಂಡಿ ಗ್ರಾಮದ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕಾವೇರಿ-ಕಪಿಲಾ-ಸ್ಪಟಿಕ ಸರೋವರ ಸಂಗಮ ಕ್ಷೇತ್ರವಾಗಿರುವ ಟಿ‌.ನರಸೀಪುರ ಕ್ಷೇತ್ರವು ಅತ್ಯಂತ ಶ್ರೇಷ್ಠ ಹಾಗು ಪವಿತ್ರವಾದ ಕ್ಷೇತ್ರವಾಗಿದೆ ಅಲ್ಲದೇ ಪರಂಪರೆ,ಸಂಸ್ಕೃತಿಯೊಂದಿಗೆ ಐತಿಹಾಸಿಕ ದೇವಾಲಯಗಳ ತವರೂರೇ ಆಗಿದೆ,ಗುಂಜಾ ನರಸಿಂಹಸ್ವಾಮಿ, ಅಗಸ್ತ್ಯೇಶ್ವರ ಹಾಗು ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಗಳ ಪವಿತ್ರ ಕ್ಷೇತ್ರವಾಗಿದ್ದು ಅರಮನೆಗೆ ಹತ್ತಿರವಾದ ಕ್ಷೇತ್ರವೂ ಆಗಿದೆ ಎಂದರು.

ಮಠಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಸಂಸ್ಕೃತಿಯ ಸಂರಕ್ಷಣೆ ಮತ್ತು ಉಳಿವಿಗಾಗಿ ಹೆಚ್ಚು ಹೆಚ್ಚಾಗಿ ನಡೆಯುವ ಅವಶ್ಯಕತೆ ಇದೆ,ಮಠದ ಮೂಲಕ ಜನರಿಗೆ ಅನ್ನ,ಅಕ್ಷರ,ಆರೋಗ್ಯ ದಂತಹ ಸೇವೆಗಳು ದೊರಕುತ್ತಿರುವುದು ಶ್ಲಾಘನೀಯವಾಗಿದ್ದು,ಇನ್ನೂ ದೊಡ್ಡ ಮಟ್ಟದಲ್ಲಿ ಜನರ ಸೇವೆ ಮಾಡಬಹುದೆಂಬ ಭಾವನೆ ನನ್ನದಾಗಿದೆ,ಮಠ ಇನ್ನೂ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗಿ ಜನರ ಸೇವೆಗೆ ಸಮರ್ಪಿಸಿಕೊಳ್ಳುವಂತಾಗಲಿ ಎಂದು ಆಶಿಸಿದರು.

ಮುಂದುವರೆದು ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಸ್ತೃತ ಭಾರತಕ್ಕೆ ನಾವೆಲ್ಲರೂ ಕೈ ಜೋಡಿಸಬೇಕಿದೆ. ಭಾರತೀಯ ಪರಂಪರೆ ಆಧಾರದ ಮೇಲೆ ವಿಸ್ತೃತ ಭಾರತವನ್ನು ನಾವು ಸಾದಿಸುತ್ತೇವೆಂಬ ಆಸೆ ಪ್ರಧಾನಿಯವರದ್ದಾಗಿದೆ ಎಂದ ಅವರು ಭಾರತದ ಪರಂಪರೆಯನ್ನು ಋಷಿ ಮುನಿಗಳು,ಬ್ರಹ್ಮಾಂಡದ ಸತ್ಯಗಳು ಹಾಗು ವೇದಗಳ ಮೂಲಕ ನಮಗೆ ಲಭ್ಯ ಮಾಡಿಕೊಟ್ಟರೋ ಆ ಸಮಯದಿಂದಲೂ ನಮ್ಮ ಭಾರತೀಯ ಪರಂಪರೆ ಉಳಿದು ಬೆಳದುಕೊಂಡು ಬಂದಿದೆ,ಮಠಗಳ ಮೂಲಕ ಪರಂಪರೆಯ ರಕ್ಷಣೆಯಾಗಬೇಕಿದೆ,ಪ್ರಾಚೀನ ಕಾಲದಿಂದಲೂ ಪರಂಪರೆ ಉಳಿದಿರುವ ಏಕೈಕ ದೇಶ ಭಾರತವಾಗಿದ್ದು,ಬೇರಾವ ದೇಶದಲ್ಲೂ ಪರಂಪರೆ ಉಳಿದುಕೊಂಡಿಲ್ಲ,ಅದಕ್ಕಾಗಿ ಪರಂಪರೆಯ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ವಾಗಿದೆ ಎಂದರು.

ಪಟ್ಟದ ಮಠದ ಗುರುಸ್ವಾಮಿಗಳು, ಡೈರಿ ಅಧ್ಯಕ್ಷ ಮಹದೇವಸ್ವಾಮಿ,ಪುರಸಭಾ ಸದಸ್ಯ ಎಸ್. ಕೆ. ಕಿರಣ್, ಕಿರಗಸೂರು ಗ್ರಾ.ಪಂ.ಸದಸ್ಯ ಮಹದೇವಸ್ವಾಮಿ, ಶಿವರಾಜ್, ವಕೀಲ ಶಂಭುಲಿಂಗ ಸ್ವಾಮಿ,ಜ್ಞಾನೇಂದ್ರಮೂರ್ತಿ, ಗುತ್ತಿಗೆದಾರ ಮಂಟೇಲಿಂಗಪ್ಪ,ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸೋಮಶೇಖರಪ್ಪ,ವೀರಶೈವ ಮಹಾಸಭಾದ ನಿರ್ದೇಶಕ ತೊಂಟೇಶ್, ಕಸಬಾ ಪಿ ಎ ಸಿ ಎಸ್ ನಿರ್ದೇಶಕ ಸುಂದರ ಸ್ವಾಮಿ, ಯುವ ಘಟಕದ ಅಧ್ಯಕ್ಷ ಕೈಯ್ಯಂಬಳ್ಳಿ ಅಶೋಕ್, ಕೆ ಇ ಬಿ ನಿವೃತ್ತಿ ನೌಕರ ಸಿದ್ದಲಿಂಗ ಸ್ವಾಮಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

3 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

14 mins ago

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

1 hour ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

1 hour ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

2 hours ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

2 hours ago