ಮೈಸೂರು

ಸಂಸ್ಕೃತಿ ಉಳಿಸುತ್ತಿರುವ ಮಠಗಳು: ಸಂಸದ ಯದುವೀರ್‌

ತಿ.ನರಸೀಪುರ: ತಿ.ನರಸೀಪುರ ತಾಲೂಕು ಅತ್ಯದ್ಬುತವಾದ ಪರಂಪರೆ,ಸಂಸ್ಕೃತಿ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗು ರಾಜ ವಂಶಸ್ಥರಾದ ಯದುವೀರ್ ಶ್ರೀ ಕಂಠದತ್ತ ಚಾಮರಾಜ ಒಡೆಯರ್ ಹೇಳಿದರು.

ತಾಲೂಕಿನ ಬಿಲಿಗೆರೆಹುಂಡಿ ಗ್ರಾಮದ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕಾವೇರಿ-ಕಪಿಲಾ-ಸ್ಪಟಿಕ ಸರೋವರ ಸಂಗಮ ಕ್ಷೇತ್ರವಾಗಿರುವ ಟಿ‌.ನರಸೀಪುರ ಕ್ಷೇತ್ರವು ಅತ್ಯಂತ ಶ್ರೇಷ್ಠ ಹಾಗು ಪವಿತ್ರವಾದ ಕ್ಷೇತ್ರವಾಗಿದೆ ಅಲ್ಲದೇ ಪರಂಪರೆ,ಸಂಸ್ಕೃತಿಯೊಂದಿಗೆ ಐತಿಹಾಸಿಕ ದೇವಾಲಯಗಳ ತವರೂರೇ ಆಗಿದೆ,ಗುಂಜಾ ನರಸಿಂಹಸ್ವಾಮಿ, ಅಗಸ್ತ್ಯೇಶ್ವರ ಹಾಗು ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಗಳ ಪವಿತ್ರ ಕ್ಷೇತ್ರವಾಗಿದ್ದು ಅರಮನೆಗೆ ಹತ್ತಿರವಾದ ಕ್ಷೇತ್ರವೂ ಆಗಿದೆ ಎಂದರು.

ಮಠಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಸಂಸ್ಕೃತಿಯ ಸಂರಕ್ಷಣೆ ಮತ್ತು ಉಳಿವಿಗಾಗಿ ಹೆಚ್ಚು ಹೆಚ್ಚಾಗಿ ನಡೆಯುವ ಅವಶ್ಯಕತೆ ಇದೆ,ಮಠದ ಮೂಲಕ ಜನರಿಗೆ ಅನ್ನ,ಅಕ್ಷರ,ಆರೋಗ್ಯ ದಂತಹ ಸೇವೆಗಳು ದೊರಕುತ್ತಿರುವುದು ಶ್ಲಾಘನೀಯವಾಗಿದ್ದು,ಇನ್ನೂ ದೊಡ್ಡ ಮಟ್ಟದಲ್ಲಿ ಜನರ ಸೇವೆ ಮಾಡಬಹುದೆಂಬ ಭಾವನೆ ನನ್ನದಾಗಿದೆ,ಮಠ ಇನ್ನೂ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗಿ ಜನರ ಸೇವೆಗೆ ಸಮರ್ಪಿಸಿಕೊಳ್ಳುವಂತಾಗಲಿ ಎಂದು ಆಶಿಸಿದರು.

ಮುಂದುವರೆದು ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಸ್ತೃತ ಭಾರತಕ್ಕೆ ನಾವೆಲ್ಲರೂ ಕೈ ಜೋಡಿಸಬೇಕಿದೆ. ಭಾರತೀಯ ಪರಂಪರೆ ಆಧಾರದ ಮೇಲೆ ವಿಸ್ತೃತ ಭಾರತವನ್ನು ನಾವು ಸಾದಿಸುತ್ತೇವೆಂಬ ಆಸೆ ಪ್ರಧಾನಿಯವರದ್ದಾಗಿದೆ ಎಂದ ಅವರು ಭಾರತದ ಪರಂಪರೆಯನ್ನು ಋಷಿ ಮುನಿಗಳು,ಬ್ರಹ್ಮಾಂಡದ ಸತ್ಯಗಳು ಹಾಗು ವೇದಗಳ ಮೂಲಕ ನಮಗೆ ಲಭ್ಯ ಮಾಡಿಕೊಟ್ಟರೋ ಆ ಸಮಯದಿಂದಲೂ ನಮ್ಮ ಭಾರತೀಯ ಪರಂಪರೆ ಉಳಿದು ಬೆಳದುಕೊಂಡು ಬಂದಿದೆ,ಮಠಗಳ ಮೂಲಕ ಪರಂಪರೆಯ ರಕ್ಷಣೆಯಾಗಬೇಕಿದೆ,ಪ್ರಾಚೀನ ಕಾಲದಿಂದಲೂ ಪರಂಪರೆ ಉಳಿದಿರುವ ಏಕೈಕ ದೇಶ ಭಾರತವಾಗಿದ್ದು,ಬೇರಾವ ದೇಶದಲ್ಲೂ ಪರಂಪರೆ ಉಳಿದುಕೊಂಡಿಲ್ಲ,ಅದಕ್ಕಾಗಿ ಪರಂಪರೆಯ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ವಾಗಿದೆ ಎಂದರು.

ಪಟ್ಟದ ಮಠದ ಗುರುಸ್ವಾಮಿಗಳು, ಡೈರಿ ಅಧ್ಯಕ್ಷ ಮಹದೇವಸ್ವಾಮಿ,ಪುರಸಭಾ ಸದಸ್ಯ ಎಸ್. ಕೆ. ಕಿರಣ್, ಕಿರಗಸೂರು ಗ್ರಾ.ಪಂ.ಸದಸ್ಯ ಮಹದೇವಸ್ವಾಮಿ, ಶಿವರಾಜ್, ವಕೀಲ ಶಂಭುಲಿಂಗ ಸ್ವಾಮಿ,ಜ್ಞಾನೇಂದ್ರಮೂರ್ತಿ, ಗುತ್ತಿಗೆದಾರ ಮಂಟೇಲಿಂಗಪ್ಪ,ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸೋಮಶೇಖರಪ್ಪ,ವೀರಶೈವ ಮಹಾಸಭಾದ ನಿರ್ದೇಶಕ ತೊಂಟೇಶ್, ಕಸಬಾ ಪಿ ಎ ಸಿ ಎಸ್ ನಿರ್ದೇಶಕ ಸುಂದರ ಸ್ವಾಮಿ, ಯುವ ಘಟಕದ ಅಧ್ಯಕ್ಷ ಕೈಯ್ಯಂಬಳ್ಳಿ ಅಶೋಕ್, ಕೆ ಇ ಬಿ ನಿವೃತ್ತಿ ನೌಕರ ಸಿದ್ದಲಿಂಗ ಸ್ವಾಮಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago