ಮೈಸೂರು

ಸಂಸ್ಕೃತಿ ಉಳಿಸುತ್ತಿರುವ ಮಠಗಳು: ಸಂಸದ ಯದುವೀರ್‌

ತಿ.ನರಸೀಪುರ: ತಿ.ನರಸೀಪುರ ತಾಲೂಕು ಅತ್ಯದ್ಬುತವಾದ ಪರಂಪರೆ,ಸಂಸ್ಕೃತಿ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗು ರಾಜ ವಂಶಸ್ಥರಾದ ಯದುವೀರ್ ಶ್ರೀ ಕಂಠದತ್ತ ಚಾಮರಾಜ ಒಡೆಯರ್ ಹೇಳಿದರು.

ತಾಲೂಕಿನ ಬಿಲಿಗೆರೆಹುಂಡಿ ಗ್ರಾಮದ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕಾವೇರಿ-ಕಪಿಲಾ-ಸ್ಪಟಿಕ ಸರೋವರ ಸಂಗಮ ಕ್ಷೇತ್ರವಾಗಿರುವ ಟಿ‌.ನರಸೀಪುರ ಕ್ಷೇತ್ರವು ಅತ್ಯಂತ ಶ್ರೇಷ್ಠ ಹಾಗು ಪವಿತ್ರವಾದ ಕ್ಷೇತ್ರವಾಗಿದೆ ಅಲ್ಲದೇ ಪರಂಪರೆ,ಸಂಸ್ಕೃತಿಯೊಂದಿಗೆ ಐತಿಹಾಸಿಕ ದೇವಾಲಯಗಳ ತವರೂರೇ ಆಗಿದೆ,ಗುಂಜಾ ನರಸಿಂಹಸ್ವಾಮಿ, ಅಗಸ್ತ್ಯೇಶ್ವರ ಹಾಗು ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಗಳ ಪವಿತ್ರ ಕ್ಷೇತ್ರವಾಗಿದ್ದು ಅರಮನೆಗೆ ಹತ್ತಿರವಾದ ಕ್ಷೇತ್ರವೂ ಆಗಿದೆ ಎಂದರು.

ಮಠಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಸಂಸ್ಕೃತಿಯ ಸಂರಕ್ಷಣೆ ಮತ್ತು ಉಳಿವಿಗಾಗಿ ಹೆಚ್ಚು ಹೆಚ್ಚಾಗಿ ನಡೆಯುವ ಅವಶ್ಯಕತೆ ಇದೆ,ಮಠದ ಮೂಲಕ ಜನರಿಗೆ ಅನ್ನ,ಅಕ್ಷರ,ಆರೋಗ್ಯ ದಂತಹ ಸೇವೆಗಳು ದೊರಕುತ್ತಿರುವುದು ಶ್ಲಾಘನೀಯವಾಗಿದ್ದು,ಇನ್ನೂ ದೊಡ್ಡ ಮಟ್ಟದಲ್ಲಿ ಜನರ ಸೇವೆ ಮಾಡಬಹುದೆಂಬ ಭಾವನೆ ನನ್ನದಾಗಿದೆ,ಮಠ ಇನ್ನೂ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗಿ ಜನರ ಸೇವೆಗೆ ಸಮರ್ಪಿಸಿಕೊಳ್ಳುವಂತಾಗಲಿ ಎಂದು ಆಶಿಸಿದರು.

ಮುಂದುವರೆದು ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಸ್ತೃತ ಭಾರತಕ್ಕೆ ನಾವೆಲ್ಲರೂ ಕೈ ಜೋಡಿಸಬೇಕಿದೆ. ಭಾರತೀಯ ಪರಂಪರೆ ಆಧಾರದ ಮೇಲೆ ವಿಸ್ತೃತ ಭಾರತವನ್ನು ನಾವು ಸಾದಿಸುತ್ತೇವೆಂಬ ಆಸೆ ಪ್ರಧಾನಿಯವರದ್ದಾಗಿದೆ ಎಂದ ಅವರು ಭಾರತದ ಪರಂಪರೆಯನ್ನು ಋಷಿ ಮುನಿಗಳು,ಬ್ರಹ್ಮಾಂಡದ ಸತ್ಯಗಳು ಹಾಗು ವೇದಗಳ ಮೂಲಕ ನಮಗೆ ಲಭ್ಯ ಮಾಡಿಕೊಟ್ಟರೋ ಆ ಸಮಯದಿಂದಲೂ ನಮ್ಮ ಭಾರತೀಯ ಪರಂಪರೆ ಉಳಿದು ಬೆಳದುಕೊಂಡು ಬಂದಿದೆ,ಮಠಗಳ ಮೂಲಕ ಪರಂಪರೆಯ ರಕ್ಷಣೆಯಾಗಬೇಕಿದೆ,ಪ್ರಾಚೀನ ಕಾಲದಿಂದಲೂ ಪರಂಪರೆ ಉಳಿದಿರುವ ಏಕೈಕ ದೇಶ ಭಾರತವಾಗಿದ್ದು,ಬೇರಾವ ದೇಶದಲ್ಲೂ ಪರಂಪರೆ ಉಳಿದುಕೊಂಡಿಲ್ಲ,ಅದಕ್ಕಾಗಿ ಪರಂಪರೆಯ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ವಾಗಿದೆ ಎಂದರು.

ಪಟ್ಟದ ಮಠದ ಗುರುಸ್ವಾಮಿಗಳು, ಡೈರಿ ಅಧ್ಯಕ್ಷ ಮಹದೇವಸ್ವಾಮಿ,ಪುರಸಭಾ ಸದಸ್ಯ ಎಸ್. ಕೆ. ಕಿರಣ್, ಕಿರಗಸೂರು ಗ್ರಾ.ಪಂ.ಸದಸ್ಯ ಮಹದೇವಸ್ವಾಮಿ, ಶಿವರಾಜ್, ವಕೀಲ ಶಂಭುಲಿಂಗ ಸ್ವಾಮಿ,ಜ್ಞಾನೇಂದ್ರಮೂರ್ತಿ, ಗುತ್ತಿಗೆದಾರ ಮಂಟೇಲಿಂಗಪ್ಪ,ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸೋಮಶೇಖರಪ್ಪ,ವೀರಶೈವ ಮಹಾಸಭಾದ ನಿರ್ದೇಶಕ ತೊಂಟೇಶ್, ಕಸಬಾ ಪಿ ಎ ಸಿ ಎಸ್ ನಿರ್ದೇಶಕ ಸುಂದರ ಸ್ವಾಮಿ, ಯುವ ಘಟಕದ ಅಧ್ಯಕ್ಷ ಕೈಯ್ಯಂಬಳ್ಳಿ ಅಶೋಕ್, ಕೆ ಇ ಬಿ ನಿವೃತ್ತಿ ನೌಕರ ಸಿದ್ದಲಿಂಗ ಸ್ವಾಮಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago