ಮೈಸೂರು : ನಗರದ ಗಾಂಧಿ ನಗರ ಸೇರಿದಂತೆ ವಾರ್ಡ್ ನಂ.28 ಹಾಗೂ 29 ರಲ್ಲಿನ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಿದರು. ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಯರ್ ಶಿವಕುಮಾರ್ ಸೂಚಿಸಿದರು.
ಪಾದಯಾತ್ರೆ ನಡೆಸಿ ಪರಿಸ್ಥಿತಿ ವೀಕ್ಷಿಸಿ, ಜನರ ಕುಂದುಕೊರತೆಗಳನ್ನು ಆಲಿಸಿದರು. ಹಲವು ದಿನಗಳಿಂದ ರಾತ್ರಿ ವೇಳೆ ಬೀಳುತ್ತಿರುವ ಮಳೆಯಿಂದಾಗಿ ರಸ್ತೆಗಳು, ಒಳಚರಂಡಿ ಸಂಪರ್ಕ ಹಾಳಾಗಿರುವುದನ್ನು ವೀಕ್ಷಿಸಿದರು. ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಅವರಿಗೆ ಹಲವು ಸಮಸ್ಯೆಗಳನ್ನು ನೋಡಿದ್ದು, ರಸ್ತೆಗಳು ಹಾಳಾಗಿರುವುದು, ಮ್ಯಾನ್ಹೋಲ್ಗಳು ಉಕ್ಕಿ ಹರಿಯುತ್ತಿದ್ದುದ್ದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.
ನಿವಾಸಿಗಳ ಅಳಲು : ಒಳಚರಂಡಿ ಮಾರ್ಗ ದುರಸ್ತಿಪಡಿಸದ ಕಾರಣದಿಂದ ಕೊಳಚೆ ನೀರು ರಸ್ತೆಗೆ ಬರುತ್ತಿದೆ. ಸಾಂಕ್ರಾಮಿಕ ರೋಗಗಳು ಹರಡುತ್ತಿವೆ ಎಂದು ನಿವಾಸಿಗಳು ತಿಳಿಸಿದರು.
ಹೊಸದಾಗಿ ಯುಜಿಡಿ ಅಳವಡಿಕೆಗೆ 23 ದಿನಗಳಲ್ಲಿ ಕ್ರಿಯಾಯೋಜನೆ ರೂಪಿಸಿ ಸಲ್ಲಿಸಬೇಕು. ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಅವರಿಗೆ ಮೊಬೈಲ್ ಪೋನ್ ಕರೆ ಮಾಡಿ ಸೂಚಿಸಿದರು.
ನಗರಪಾಲಿಕೆ ಸದಸ್ಯ ಅಸ್ರತುಲ್ಲಾ, ಮುಖಂಡ ಶರತ್ ಸತೀಶ್, ಯುಜಿಡಿ ವಿಭಾಗದ ಇಇ ಸಿಂಧು, ಎಇಇ ಮಹೇಶ್, ಬಿಜೆಪಿ ಗಾಂಧಿನಗರ ಘಟಕದ ಅಧ್ಯಕ್ಷ ನಾಗರಾಜು, ಮುಖಂಡರಾದ ವಿಜಯ್, ಸುರೇಶ್, ರಾಜೇಶ್, ಸುರೇಂದ್ರ, ಕರ್ಣ, ಸಾಧಿಕ್, ಪ್ರಭು, ವಿವೇಕ್, ಸಚಿನ್, ರಾಮಗೋಪಾಲ್, ಚಂದ್ರು, ದೀಪಕ್ ಹಾಗೂ ಮಹಾನಗರ ಪಾಲಿಕೆಯ ಸಿಬ್ಬಂದಿ ಇದ್ದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…
ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…
ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ…
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…