ಮೈಸೂರು : ನಗರದ ಗಾಂಧಿ ನಗರ ಸೇರಿದಂತೆ ವಾರ್ಡ್ ನಂ.28 ಹಾಗೂ 29 ರಲ್ಲಿನ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಿದರು. ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಯರ್ ಶಿವಕುಮಾರ್ ಸೂಚಿಸಿದರು.
ಪಾದಯಾತ್ರೆ ನಡೆಸಿ ಪರಿಸ್ಥಿತಿ ವೀಕ್ಷಿಸಿ, ಜನರ ಕುಂದುಕೊರತೆಗಳನ್ನು ಆಲಿಸಿದರು. ಹಲವು ದಿನಗಳಿಂದ ರಾತ್ರಿ ವೇಳೆ ಬೀಳುತ್ತಿರುವ ಮಳೆಯಿಂದಾಗಿ ರಸ್ತೆಗಳು, ಒಳಚರಂಡಿ ಸಂಪರ್ಕ ಹಾಳಾಗಿರುವುದನ್ನು ವೀಕ್ಷಿಸಿದರು. ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಅವರಿಗೆ ಹಲವು ಸಮಸ್ಯೆಗಳನ್ನು ನೋಡಿದ್ದು, ರಸ್ತೆಗಳು ಹಾಳಾಗಿರುವುದು, ಮ್ಯಾನ್ಹೋಲ್ಗಳು ಉಕ್ಕಿ ಹರಿಯುತ್ತಿದ್ದುದ್ದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.
ನಿವಾಸಿಗಳ ಅಳಲು : ಒಳಚರಂಡಿ ಮಾರ್ಗ ದುರಸ್ತಿಪಡಿಸದ ಕಾರಣದಿಂದ ಕೊಳಚೆ ನೀರು ರಸ್ತೆಗೆ ಬರುತ್ತಿದೆ. ಸಾಂಕ್ರಾಮಿಕ ರೋಗಗಳು ಹರಡುತ್ತಿವೆ ಎಂದು ನಿವಾಸಿಗಳು ತಿಳಿಸಿದರು.
ಹೊಸದಾಗಿ ಯುಜಿಡಿ ಅಳವಡಿಕೆಗೆ 23 ದಿನಗಳಲ್ಲಿ ಕ್ರಿಯಾಯೋಜನೆ ರೂಪಿಸಿ ಸಲ್ಲಿಸಬೇಕು. ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಅವರಿಗೆ ಮೊಬೈಲ್ ಪೋನ್ ಕರೆ ಮಾಡಿ ಸೂಚಿಸಿದರು.
ನಗರಪಾಲಿಕೆ ಸದಸ್ಯ ಅಸ್ರತುಲ್ಲಾ, ಮುಖಂಡ ಶರತ್ ಸತೀಶ್, ಯುಜಿಡಿ ವಿಭಾಗದ ಇಇ ಸಿಂಧು, ಎಇಇ ಮಹೇಶ್, ಬಿಜೆಪಿ ಗಾಂಧಿನಗರ ಘಟಕದ ಅಧ್ಯಕ್ಷ ನಾಗರಾಜು, ಮುಖಂಡರಾದ ವಿಜಯ್, ಸುರೇಶ್, ರಾಜೇಶ್, ಸುರೇಂದ್ರ, ಕರ್ಣ, ಸಾಧಿಕ್, ಪ್ರಭು, ವಿವೇಕ್, ಸಚಿನ್, ರಾಮಗೋಪಾಲ್, ಚಂದ್ರು, ದೀಪಕ್ ಹಾಗೂ ಮಹಾನಗರ ಪಾಲಿಕೆಯ ಸಿಬ್ಬಂದಿ ಇದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…