ಮೈಸೂರು : ನಗರದ ಗಾಂಧಿ ನಗರ ಸೇರಿದಂತೆ ವಾರ್ಡ್ ನಂ.28 ಹಾಗೂ 29 ರಲ್ಲಿನ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಿದರು. ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಯರ್ ಶಿವಕುಮಾರ್ ಸೂಚಿಸಿದರು.
ಪಾದಯಾತ್ರೆ ನಡೆಸಿ ಪರಿಸ್ಥಿತಿ ವೀಕ್ಷಿಸಿ, ಜನರ ಕುಂದುಕೊರತೆಗಳನ್ನು ಆಲಿಸಿದರು. ಹಲವು ದಿನಗಳಿಂದ ರಾತ್ರಿ ವೇಳೆ ಬೀಳುತ್ತಿರುವ ಮಳೆಯಿಂದಾಗಿ ರಸ್ತೆಗಳು, ಒಳಚರಂಡಿ ಸಂಪರ್ಕ ಹಾಳಾಗಿರುವುದನ್ನು ವೀಕ್ಷಿಸಿದರು. ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಅವರಿಗೆ ಹಲವು ಸಮಸ್ಯೆಗಳನ್ನು ನೋಡಿದ್ದು, ರಸ್ತೆಗಳು ಹಾಳಾಗಿರುವುದು, ಮ್ಯಾನ್ಹೋಲ್ಗಳು ಉಕ್ಕಿ ಹರಿಯುತ್ತಿದ್ದುದ್ದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.
ನಿವಾಸಿಗಳ ಅಳಲು : ಒಳಚರಂಡಿ ಮಾರ್ಗ ದುರಸ್ತಿಪಡಿಸದ ಕಾರಣದಿಂದ ಕೊಳಚೆ ನೀರು ರಸ್ತೆಗೆ ಬರುತ್ತಿದೆ. ಸಾಂಕ್ರಾಮಿಕ ರೋಗಗಳು ಹರಡುತ್ತಿವೆ ಎಂದು ನಿವಾಸಿಗಳು ತಿಳಿಸಿದರು.
ಹೊಸದಾಗಿ ಯುಜಿಡಿ ಅಳವಡಿಕೆಗೆ 23 ದಿನಗಳಲ್ಲಿ ಕ್ರಿಯಾಯೋಜನೆ ರೂಪಿಸಿ ಸಲ್ಲಿಸಬೇಕು. ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಅವರಿಗೆ ಮೊಬೈಲ್ ಪೋನ್ ಕರೆ ಮಾಡಿ ಸೂಚಿಸಿದರು.
ನಗರಪಾಲಿಕೆ ಸದಸ್ಯ ಅಸ್ರತುಲ್ಲಾ, ಮುಖಂಡ ಶರತ್ ಸತೀಶ್, ಯುಜಿಡಿ ವಿಭಾಗದ ಇಇ ಸಿಂಧು, ಎಇಇ ಮಹೇಶ್, ಬಿಜೆಪಿ ಗಾಂಧಿನಗರ ಘಟಕದ ಅಧ್ಯಕ್ಷ ನಾಗರಾಜು, ಮುಖಂಡರಾದ ವಿಜಯ್, ಸುರೇಶ್, ರಾಜೇಶ್, ಸುರೇಂದ್ರ, ಕರ್ಣ, ಸಾಧಿಕ್, ಪ್ರಭು, ವಿವೇಕ್, ಸಚಿನ್, ರಾಮಗೋಪಾಲ್, ಚಂದ್ರು, ದೀಪಕ್ ಹಾಗೂ ಮಹಾನಗರ ಪಾಲಿಕೆಯ ಸಿಬ್ಬಂದಿ ಇದ್ದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…