ಮೈಸೂರು

ಎಂಡಿಎಂಎ ಪ್ರಕರಣ | ಪೆಡ್ಲರ್‌ಗಳ ಬಂಧನ, ಮೂರು ತಂಡ ರಚನೆ

ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ ಮಾರಾಟ ಮಾಡುತ್ತಿದ್ದ ಮೂವರು ಹಾಗೂ ಸೇವನೆ ಮಾಡುತ್ತಿದ್ದ 27 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದಲ್ಲಿ ಕೋಟ್ಯಾಂತ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಲ್ಲದೆ. ತಯಾರಕ ಘಟಕವೂ ಇತ್ತು ಎಂಬ ವಿಚಾರ ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರಿಗೆ ಇರಿಸುಮುರಿಸು ಉಂಟಾಗಿದೆ.

ಹೀಗಾಗಿ ರಾತ್ರೋರಾತ್ರಿ ಕಾರ್ಯಾಚರಣೆಗ ಇಳಿದಿರುವ ಸೀಮಾ ಲಾಟ್ಕರ್‌ ನಗರದ ವಿವಿದೆಡೆ ಇರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಜರುಗುವ ಚಟುವಟಿಕೆ, ಅದಕ್ಕೆ ಅನುಮತಿ ಪಡೆಯಲಾಗಿದೆಯೇ, ಮಾಲೀಕರು ಯಾರು ಎಂಬ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ.

ಹಾಸ್ಟಲ್‌ಗಳಿಗೆ ಭೇಟಿ: ನಗರದ ವೈದ್ಯಕೀಯ, ಇಂಜಿನಿರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳೇ ಡ್ರಗ್ ಪೆಡ್ಲರ್‌ಗಳಿಗೆ ಟಾರ್ಗೆಟ್ ಎಂಬ ವಿಚಾರ ತಿಳಿದ ಆಯುಕ್ತರು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಕೊಠಡಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್‌ಗಳ ಪರಿಶೀಲನೆ: ಇದೇ ವೇಳೆ ನಗರದ ಕೆಲ ಲಾಡ್ಜ್‌ಗಳಿಗೂ ಕೂಡ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಹೊರ ರಾಜ್ಯಗಳಿಂದ ಬಂದು ಇಲ್ಲಿ ಉಳಿದುಕೊಳ್ಳುವವರ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಲ್ಲದೆ, ಅಲ್ಲಿನ ಕೊಠಡಿಗಳ ಪರಿಶೀಲನೆ ನಡೆಸಿದ್ದಾರೆ.

ಕುವೆಂಪುನಗರ, ಉದಯಗಿರಿಯಲ್ಲಿ ಪೆಡ್ಲರ್ ಬಂಧನ: ಗಾಂಜ ಮಾರಾಟವನ್ನು ಹತ್ತಿಕ್ಕಲೇಬೇಕು ಎಂದು ನಿರ್ಧರಿಸಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಕುವೆಂಪುನಗರದಲ್ಲಿ ಹಾಗೂ ಉದಯಗಿರಿಯಲ್ಲಿ ಗಾಂಜ ಮಾರಾಟ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮೂರು ತಂಡಗಳ ರಚನೆ: ಗಾಂಜ ಮಾರಾಟ ಹಾಗೂ ಸೇವನೆ ಮಡುವವರನ್ನು ಹೆಡೆಮುರಿ ಕಟ್ಟಬೇಕು ಎಂಬ ತೀರ್ಮಾನಿಸಿರುವ ಆಯುಕ್ತರು ಖಡಕ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಿದ್ದಾರೆ. ಗಾಂಜ ಮಾರಾಟ ಮಾಡುವ ಹಳೆಯ ಆರೋಪಿಗಳು, ನಗರದ ಹೊರವಲಯದ ಮನೆ, ಹಾಗೂ ಶೆಡ್‌ಗಳನ್ನು ಗಮನಿಸುವುದು ಹಾಗೂ ಹಾಸ್ಟಲ್, ವಸತಿಗೃಹ, ಶೆಡ್‌ಗಳ ಬಗ್ಗೆ ಗಮನಹರಿಸಲು ಮೂರು ತಂಡಗಳನ್ನು ಆಯುಕ್ತರು ರಚಿಸಿದ್ದು, ಅವರುಗಳು ಸೋಮವಾರದಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

19 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

25 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

40 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

12 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

12 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago