ಮೈಸೂರು

ಎಂಡಿಎಂಎ ಪ್ರಕರಣ | ಪೆಡ್ಲರ್‌ಗಳ ಬಂಧನ, ಮೂರು ತಂಡ ರಚನೆ

ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ ಮಾರಾಟ ಮಾಡುತ್ತಿದ್ದ ಮೂವರು ಹಾಗೂ ಸೇವನೆ ಮಾಡುತ್ತಿದ್ದ 27 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದಲ್ಲಿ ಕೋಟ್ಯಾಂತ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಲ್ಲದೆ. ತಯಾರಕ ಘಟಕವೂ ಇತ್ತು ಎಂಬ ವಿಚಾರ ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರಿಗೆ ಇರಿಸುಮುರಿಸು ಉಂಟಾಗಿದೆ.

ಹೀಗಾಗಿ ರಾತ್ರೋರಾತ್ರಿ ಕಾರ್ಯಾಚರಣೆಗ ಇಳಿದಿರುವ ಸೀಮಾ ಲಾಟ್ಕರ್‌ ನಗರದ ವಿವಿದೆಡೆ ಇರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಜರುಗುವ ಚಟುವಟಿಕೆ, ಅದಕ್ಕೆ ಅನುಮತಿ ಪಡೆಯಲಾಗಿದೆಯೇ, ಮಾಲೀಕರು ಯಾರು ಎಂಬ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ.

ಹಾಸ್ಟಲ್‌ಗಳಿಗೆ ಭೇಟಿ: ನಗರದ ವೈದ್ಯಕೀಯ, ಇಂಜಿನಿರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳೇ ಡ್ರಗ್ ಪೆಡ್ಲರ್‌ಗಳಿಗೆ ಟಾರ್ಗೆಟ್ ಎಂಬ ವಿಚಾರ ತಿಳಿದ ಆಯುಕ್ತರು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಕೊಠಡಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್‌ಗಳ ಪರಿಶೀಲನೆ: ಇದೇ ವೇಳೆ ನಗರದ ಕೆಲ ಲಾಡ್ಜ್‌ಗಳಿಗೂ ಕೂಡ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಹೊರ ರಾಜ್ಯಗಳಿಂದ ಬಂದು ಇಲ್ಲಿ ಉಳಿದುಕೊಳ್ಳುವವರ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಲ್ಲದೆ, ಅಲ್ಲಿನ ಕೊಠಡಿಗಳ ಪರಿಶೀಲನೆ ನಡೆಸಿದ್ದಾರೆ.

ಕುವೆಂಪುನಗರ, ಉದಯಗಿರಿಯಲ್ಲಿ ಪೆಡ್ಲರ್ ಬಂಧನ: ಗಾಂಜ ಮಾರಾಟವನ್ನು ಹತ್ತಿಕ್ಕಲೇಬೇಕು ಎಂದು ನಿರ್ಧರಿಸಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಕುವೆಂಪುನಗರದಲ್ಲಿ ಹಾಗೂ ಉದಯಗಿರಿಯಲ್ಲಿ ಗಾಂಜ ಮಾರಾಟ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮೂರು ತಂಡಗಳ ರಚನೆ: ಗಾಂಜ ಮಾರಾಟ ಹಾಗೂ ಸೇವನೆ ಮಡುವವರನ್ನು ಹೆಡೆಮುರಿ ಕಟ್ಟಬೇಕು ಎಂಬ ತೀರ್ಮಾನಿಸಿರುವ ಆಯುಕ್ತರು ಖಡಕ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಿದ್ದಾರೆ. ಗಾಂಜ ಮಾರಾಟ ಮಾಡುವ ಹಳೆಯ ಆರೋಪಿಗಳು, ನಗರದ ಹೊರವಲಯದ ಮನೆ, ಹಾಗೂ ಶೆಡ್‌ಗಳನ್ನು ಗಮನಿಸುವುದು ಹಾಗೂ ಹಾಸ್ಟಲ್, ವಸತಿಗೃಹ, ಶೆಡ್‌ಗಳ ಬಗ್ಗೆ ಗಮನಹರಿಸಲು ಮೂರು ತಂಡಗಳನ್ನು ಆಯುಕ್ತರು ರಚಿಸಿದ್ದು, ಅವರುಗಳು ಸೋಮವಾರದಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

8 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

10 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

12 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

12 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

13 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

13 hours ago