ಮೈಸೂರು

ಎಂಡಿಎಂಎ ಪ್ರಕರಣ | ಪೆಡ್ಲರ್‌ಗಳ ಬಂಧನ, ಮೂರು ತಂಡ ರಚನೆ

ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ ಮಾರಾಟ ಮಾಡುತ್ತಿದ್ದ ಮೂವರು ಹಾಗೂ ಸೇವನೆ ಮಾಡುತ್ತಿದ್ದ 27 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದಲ್ಲಿ ಕೋಟ್ಯಾಂತ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಲ್ಲದೆ. ತಯಾರಕ ಘಟಕವೂ ಇತ್ತು ಎಂಬ ವಿಚಾರ ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರಿಗೆ ಇರಿಸುಮುರಿಸು ಉಂಟಾಗಿದೆ.

ಹೀಗಾಗಿ ರಾತ್ರೋರಾತ್ರಿ ಕಾರ್ಯಾಚರಣೆಗ ಇಳಿದಿರುವ ಸೀಮಾ ಲಾಟ್ಕರ್‌ ನಗರದ ವಿವಿದೆಡೆ ಇರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಜರುಗುವ ಚಟುವಟಿಕೆ, ಅದಕ್ಕೆ ಅನುಮತಿ ಪಡೆಯಲಾಗಿದೆಯೇ, ಮಾಲೀಕರು ಯಾರು ಎಂಬ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ.

ಹಾಸ್ಟಲ್‌ಗಳಿಗೆ ಭೇಟಿ: ನಗರದ ವೈದ್ಯಕೀಯ, ಇಂಜಿನಿರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳೇ ಡ್ರಗ್ ಪೆಡ್ಲರ್‌ಗಳಿಗೆ ಟಾರ್ಗೆಟ್ ಎಂಬ ವಿಚಾರ ತಿಳಿದ ಆಯುಕ್ತರು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಕೊಠಡಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್‌ಗಳ ಪರಿಶೀಲನೆ: ಇದೇ ವೇಳೆ ನಗರದ ಕೆಲ ಲಾಡ್ಜ್‌ಗಳಿಗೂ ಕೂಡ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಹೊರ ರಾಜ್ಯಗಳಿಂದ ಬಂದು ಇಲ್ಲಿ ಉಳಿದುಕೊಳ್ಳುವವರ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಲ್ಲದೆ, ಅಲ್ಲಿನ ಕೊಠಡಿಗಳ ಪರಿಶೀಲನೆ ನಡೆಸಿದ್ದಾರೆ.

ಕುವೆಂಪುನಗರ, ಉದಯಗಿರಿಯಲ್ಲಿ ಪೆಡ್ಲರ್ ಬಂಧನ: ಗಾಂಜ ಮಾರಾಟವನ್ನು ಹತ್ತಿಕ್ಕಲೇಬೇಕು ಎಂದು ನಿರ್ಧರಿಸಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಕುವೆಂಪುನಗರದಲ್ಲಿ ಹಾಗೂ ಉದಯಗಿರಿಯಲ್ಲಿ ಗಾಂಜ ಮಾರಾಟ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮೂರು ತಂಡಗಳ ರಚನೆ: ಗಾಂಜ ಮಾರಾಟ ಹಾಗೂ ಸೇವನೆ ಮಡುವವರನ್ನು ಹೆಡೆಮುರಿ ಕಟ್ಟಬೇಕು ಎಂಬ ತೀರ್ಮಾನಿಸಿರುವ ಆಯುಕ್ತರು ಖಡಕ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಿದ್ದಾರೆ. ಗಾಂಜ ಮಾರಾಟ ಮಾಡುವ ಹಳೆಯ ಆರೋಪಿಗಳು, ನಗರದ ಹೊರವಲಯದ ಮನೆ, ಹಾಗೂ ಶೆಡ್‌ಗಳನ್ನು ಗಮನಿಸುವುದು ಹಾಗೂ ಹಾಸ್ಟಲ್, ವಸತಿಗೃಹ, ಶೆಡ್‌ಗಳ ಬಗ್ಗೆ ಗಮನಹರಿಸಲು ಮೂರು ತಂಡಗಳನ್ನು ಆಯುಕ್ತರು ರಚಿಸಿದ್ದು, ಅವರುಗಳು ಸೋಮವಾರದಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

7 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

7 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

7 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

8 hours ago