ಮೈಸೂರು

ಎಂಡಿಎಂಎ ಪ್ರಕರಣ | ಪೆಡ್ಲರ್‌ಗಳ ಬಂಧನ, ಮೂರು ತಂಡ ರಚನೆ

ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ ಮಾರಾಟ ಮಾಡುತ್ತಿದ್ದ ಮೂವರು ಹಾಗೂ ಸೇವನೆ ಮಾಡುತ್ತಿದ್ದ 27 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದಲ್ಲಿ ಕೋಟ್ಯಾಂತ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಲ್ಲದೆ. ತಯಾರಕ ಘಟಕವೂ ಇತ್ತು ಎಂಬ ವಿಚಾರ ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರಿಗೆ ಇರಿಸುಮುರಿಸು ಉಂಟಾಗಿದೆ.

ಹೀಗಾಗಿ ರಾತ್ರೋರಾತ್ರಿ ಕಾರ್ಯಾಚರಣೆಗ ಇಳಿದಿರುವ ಸೀಮಾ ಲಾಟ್ಕರ್‌ ನಗರದ ವಿವಿದೆಡೆ ಇರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಜರುಗುವ ಚಟುವಟಿಕೆ, ಅದಕ್ಕೆ ಅನುಮತಿ ಪಡೆಯಲಾಗಿದೆಯೇ, ಮಾಲೀಕರು ಯಾರು ಎಂಬ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ.

ಹಾಸ್ಟಲ್‌ಗಳಿಗೆ ಭೇಟಿ: ನಗರದ ವೈದ್ಯಕೀಯ, ಇಂಜಿನಿರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳೇ ಡ್ರಗ್ ಪೆಡ್ಲರ್‌ಗಳಿಗೆ ಟಾರ್ಗೆಟ್ ಎಂಬ ವಿಚಾರ ತಿಳಿದ ಆಯುಕ್ತರು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಕೊಠಡಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್‌ಗಳ ಪರಿಶೀಲನೆ: ಇದೇ ವೇಳೆ ನಗರದ ಕೆಲ ಲಾಡ್ಜ್‌ಗಳಿಗೂ ಕೂಡ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಹೊರ ರಾಜ್ಯಗಳಿಂದ ಬಂದು ಇಲ್ಲಿ ಉಳಿದುಕೊಳ್ಳುವವರ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಲ್ಲದೆ, ಅಲ್ಲಿನ ಕೊಠಡಿಗಳ ಪರಿಶೀಲನೆ ನಡೆಸಿದ್ದಾರೆ.

ಕುವೆಂಪುನಗರ, ಉದಯಗಿರಿಯಲ್ಲಿ ಪೆಡ್ಲರ್ ಬಂಧನ: ಗಾಂಜ ಮಾರಾಟವನ್ನು ಹತ್ತಿಕ್ಕಲೇಬೇಕು ಎಂದು ನಿರ್ಧರಿಸಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಕುವೆಂಪುನಗರದಲ್ಲಿ ಹಾಗೂ ಉದಯಗಿರಿಯಲ್ಲಿ ಗಾಂಜ ಮಾರಾಟ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮೂರು ತಂಡಗಳ ರಚನೆ: ಗಾಂಜ ಮಾರಾಟ ಹಾಗೂ ಸೇವನೆ ಮಡುವವರನ್ನು ಹೆಡೆಮುರಿ ಕಟ್ಟಬೇಕು ಎಂಬ ತೀರ್ಮಾನಿಸಿರುವ ಆಯುಕ್ತರು ಖಡಕ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಿದ್ದಾರೆ. ಗಾಂಜ ಮಾರಾಟ ಮಾಡುವ ಹಳೆಯ ಆರೋಪಿಗಳು, ನಗರದ ಹೊರವಲಯದ ಮನೆ, ಹಾಗೂ ಶೆಡ್‌ಗಳನ್ನು ಗಮನಿಸುವುದು ಹಾಗೂ ಹಾಸ್ಟಲ್, ವಸತಿಗೃಹ, ಶೆಡ್‌ಗಳ ಬಗ್ಗೆ ಗಮನಹರಿಸಲು ಮೂರು ತಂಡಗಳನ್ನು ಆಯುಕ್ತರು ರಚಿಸಿದ್ದು, ಅವರುಗಳು ಸೋಮವಾರದಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

13 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

16 mins ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

22 mins ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

26 mins ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

31 mins ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

36 mins ago