ಮೈಸೂರು: ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಯಾದವಗಿರಿ ಸೇವಾಕೇಂದ್ರದಲ್ಲಿ ಏರ್ಪಡಿಸಿದ್ದ ರಕ್ಷಾ ಬಂಧನ ಮಹೋತ್ಸವದಲ್ಲಿ ಭಾಗವಹಿಸಿದ್ದ ಮೇಘಾಲಯ ರಾಜ್ಯಪಾಲ ಸಿ. ಎಚ್. ವಿಜಯಶಂಕರ್ ರವರಿಗೆ ಬಿ. ಕೆ. ಲಕ್ಷ್ಮೀಜಿ ಶ್ರೀರಕ್ಷೆಯನ್ನು ನೀಡಿ ಶುಭ ಹಾರೈಸಿದರು.
ಬಳಿಕ ಮಾತನಾಡಿದ ರಾಜ್ಯಪಾಲ ವಿಜಯಶಂಕರ್, ರಕ್ಷಾ ಬಂಧನದಲ್ಲಿ ಪಾಲ್ಗೊಂಡಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿ ರಾಜಕೀಯ ಜೀವನದ ನೂತನ ಅಧ್ಯಾಯಕ್ಕೆ ತಾವು ಒಮ್ಮನಸ್ಸಿನಿಂದ ಮತ್ತು ಉತ್ಸಾಹದಿಂದ ಹೃದಯವನ್ನು ತೆರೆದುಕೊಂಡಿದ್ದೇನೆ ಎಂದರು.
60 ಶಾಸಕರಿರುವ ಮೇಘಾಲಯದ ಪುಟ್ಟರಾಜ್ಯದ ಜನಸಂಖ್ಯೆಯಲ್ಲಿ ಹೆಚ್ಚಿನoಶ ಬುಡಕಟ್ಟಿನವರೇ ಇದ್ದು ಸರಳ ಜೀವನ ನಡೆಸುತ್ತಾರೆ. ಅಲ್ಲಿ ನಾನು ಮನಃ ಪೂರ್ತಿಯಾಗಿ ಜನಸೇವೆ ಮಾಡಲು ಸಿದ್ಧನಿದ್ದು ತಮ್ಮೆಲ್ಲರ ಆಶೀರ್ವಾದದ ಅಗತ್ಯವಿದೆ ಎಂದು ಹೇಳಿದರು.
ನಾನು ಸಾರ್ವಜನಿಕ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯದ ಮಂತ್ರಿಯಾಗಿ, ಸಂಸದನಾಗಿ, ಶಾಸಕನಾಗಿ ಪಡೆದಿರುವ ಅನುಭವವನ್ನು ಅಲ್ಲಿಯ ಜನರ ಸೇವೆಯಲ್ಲಿ ವಿನಿಯೋಗಿಸಲು ಇಚ್ಚಿಸುತ್ತೇನೆ. ಈ ಬಗ್ಗೆ ಪ್ರಧಾನ ಮಂತ್ರಿ ಮೋದಿ ಕೂಡ ನನಗೆ ಸಲಹೆ ಸೂಚನೆಗಳನ್ನು ನೀಡಿದ್ದು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅವರ ಜೊತೆಯಲ್ಲಿದ್ದು ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎಂದಿದ್ದಾರೆ. ಅಲ್ಲಿಂದ ನಾನು ಹಿಂತಿರುಗಿ ಬರುವಷ್ಟರಲ್ಲಿ ಅವರ ಋಣವನ್ನು ತೀರಿಸುತ್ತೇನೆ. ದೈವ ಮತ್ತು ತಮ್ಮೆಲ್ಲರ ಶುಭ ಹಾರೈಕೆ ನನ್ನೊಟ್ಟಿಗೆ ಇದೆ ಎಂದು ಭಾವಿಸುತ್ತೇನೆ, ಎಂದು ಹೇಳಿದರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…