ಮೈಸೂರು : ನೂತನ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಸೀಮಾ ಲಟ್ಕರ್ ಹಾಗೂ ಮೈಸೂರು ಎಸ್ಪಿ ಆಗಿ ಎನ್ ವಿಷ್ಟುವರ್ಧನ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿ ಒಟ್ಟು ೨೫ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಈ ಹಿಂದೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೀಮಾ ಲಟ್ಕರ್ ಇದೀಗ ರಮೇಶ್ ಬಾನೋತ್ ಅವರ ವರ್ಗಾವಣೆ ಜಾಗಕ್ಕೆ ನೇಮಿಸಿ ಆದೇಶ ಮಾಡಲಾಗಿದೆ. ಸಿ.ಬಿ ರಿಷ್ಯಂತ್ ಅವರನ್ನು ಬೆಂಗಳೂರಿನ ವೈರಲೆಸ್ ಎಸ್ ಪಿ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ದಕ್ಷಿಣ ಕನ್ನಡದ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅವರನ್ನ ನೇಮಕಮಾಡಲಾಗಿದೆ.
ಕವಿತಾ ಬಿ.ಟಿ ಅವರನ್ನು ಚಾಮರಾಜನಗರ ಜಿಲ್ಲೆಯ ಎಸ್ಪಿಯಾಗಿ ನೇಮಿಸಲಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆಯ ಪೊಲೀಸ್ ವರಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ್ ಬಾಲದಂಡಿಯನ್ನು ನೇಮಕ ಮಾಡಲಾಗಿದೆ
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…