Nalwadis statue
ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ ಶುಕ್ರವಾರ ನಡೆದಿದೆ.
ಇಂದು ಸಂಜೆ 4 ಗಂಟೆಯ ವೇಳೆಗೆ ನಾಲ್ವಡಿಯವರ ಪ್ರತಿಮೆಯ ತಲೆಯ ಮೇಲೆ ಏರಿ ಸುಮಾರು ಅರ್ಧ ಗಂಟೆಗಳ ಕಾಲ ಕುಳಿತಿದ್ದ ಮಾನಸಿಕ ಅಸ್ವಸ್ಥನನ್ನು ಸಾರ್ವಜನಿಕರು ಕಂಡು ಅಸಮಾಧಾನಗೊಂಡಿದ್ದಾರೆ. ಈ ವೇಳೆ ಕೂಡಲೇ ಸಮೀಪದ ದೇವರಾಜ ಪೊಲೀಸ್ ಠಾಣೆಗೆ ಸಾರ್ವಜನಿಕರು ಕರೆ ಮಾಡಿ ದೂರು ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರನ್ನು ಕಂಡು ಮಾನಸಿಕ ಅಸ್ವಸ್ಥ ಸ್ಥಳದಿಂದ ಓಡಿ ಹೋಗಿದ್ದಾನೆ.
ಸದ್ಯ ಪ್ರತಿಮೆಯ ತಲೆಯ ಮೇಲೇರಿ ಕುಳಿತಿದ್ದ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದೆ. ಆದರೆ ಪ್ರತಿಮೆ ಮೇಲೆ ಕುಳಿತಿದ್ದ ಮಾನಸಿಕ ಅಸ್ವಸ್ತ ಯಾರೆಂದು ತಿಳಿದು ಬಂದಿಲ್ಲ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…