Nalwadis statue
ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ ಶುಕ್ರವಾರ ನಡೆದಿದೆ.
ಇಂದು ಸಂಜೆ 4 ಗಂಟೆಯ ವೇಳೆಗೆ ನಾಲ್ವಡಿಯವರ ಪ್ರತಿಮೆಯ ತಲೆಯ ಮೇಲೆ ಏರಿ ಸುಮಾರು ಅರ್ಧ ಗಂಟೆಗಳ ಕಾಲ ಕುಳಿತಿದ್ದ ಮಾನಸಿಕ ಅಸ್ವಸ್ಥನನ್ನು ಸಾರ್ವಜನಿಕರು ಕಂಡು ಅಸಮಾಧಾನಗೊಂಡಿದ್ದಾರೆ. ಈ ವೇಳೆ ಕೂಡಲೇ ಸಮೀಪದ ದೇವರಾಜ ಪೊಲೀಸ್ ಠಾಣೆಗೆ ಸಾರ್ವಜನಿಕರು ಕರೆ ಮಾಡಿ ದೂರು ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರನ್ನು ಕಂಡು ಮಾನಸಿಕ ಅಸ್ವಸ್ಥ ಸ್ಥಳದಿಂದ ಓಡಿ ಹೋಗಿದ್ದಾನೆ.
ಸದ್ಯ ಪ್ರತಿಮೆಯ ತಲೆಯ ಮೇಲೇರಿ ಕುಳಿತಿದ್ದ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದೆ. ಆದರೆ ಪ್ರತಿಮೆ ಮೇಲೆ ಕುಳಿತಿದ್ದ ಮಾನಸಿಕ ಅಸ್ವಸ್ತ ಯಾರೆಂದು ತಿಳಿದು ಬಂದಿಲ್ಲ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…