ಮೈಸೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿ ವೇಳೆ ಚಿತ್ರಹಿಂಸೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರೂ, ಡೋಂಟ್ಕೇರ್ ಎನ್ನದ ಫೈನಾನ್ಸ್ಗಳು ನಾಗರಿಕ ಸಮಾಜ ತಲೆ ತಗ್ಗಿಸುವ ರೀತಿ ನಡೆದುಕೊಂಡಿವೆ.
ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೇವಲ 1280 ರೂಪಾಯಿ ಲೋನ್ ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನು ನಿಮ್ಮ ತಾಯಿ ಎಲ್ಲಿ ತೋರಿಸು ಎಂದು ಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ.
ಜಾಲಹಳ್ಳಿ ಗ್ರಾಮದ ನವೀನ್ ಹಾಗೂ ಪ್ರಮೀಳಾ ದಂಪತಿ ಜೀವನ ನಡೆಸಲು ಬಜಾಜ್ ಮೈಕ್ರೋ ಫೈನಾನ್ಸ್ನಿಂದ 30 ಸಾವಿರ ಸಾಲ ಪಡೆದು, 13 ತಿಂಗಳು ಲೋನ್ ಕಟ್ಟಿದ್ದರು. ಈ ತಿಂಗಳು 4 ದಿನ ತಡವಾಗಿದ್ದಕ್ಕೆ ಫೈನಾನ್ಸ್ ಸಿಬ್ಬಂದಿ ಚಿತ್ರ ಹಿಂಸೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮನೆಗೆ ಬಂದು ನವೀನ್ ತಾಯಿಗೆ ಬೈದು ಹಣ ಕಟ್ಟುವಂತೆ ಒತ್ತಾಯಿಸಿದ್ದಾರೆ. ಬಳಿಕ ಪಕ್ಕದ ಊರಿನಲ್ಲಿದ್ದ ಮಗುವಿನ ಬಳಿ ತೆರಳಿ ನಿಮ್ಮ ಅಮ್ಮ ಎಲ್ಲಿ ತೋರಿಸಿ ಬಾ ಎಂದು ಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದಿದ್ದಾರೆ ಎನ್ನಲಾಗಿದೆ.
ತಾಳಿ ಅಡವಿಟ್ಟು ದುಡ್ಡು ಕೊಡ್ತೀವಿ ಸಂಜೆ ಬನ್ನಿ ಎಂದರು ಬಿಡದೇ ಈಗಲೇ ಹಣ ಬೇಕು ಎಂದು ಪೀಡಿಸಿದ್ದಾರೆ. 4 ದಿನಗಳ ಹಿಂದೆ ನಡೆದಿರುವ ಘಟನೆ ಈಗ ಮೈಸೂರು ಮಕ್ಕಳ ಸಮಿತಿ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…