Mysore
27
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ ನಡೆದಿದೆ.

ನಂಜಾಪುರದ ವಸಂತಕುಮಾರ್ ಪುತ್ರ ರಂಜಿತ್ (32) ಮೃತರು. ಇವರಿಗೆ ತಂದೆ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

ರಂಜಿತ್ ಕೆ.ಆರ್.ನಗರದಲ್ಲಿ ಶಾಖೆ ಹೊಂದಿರುವ ಖಾಸಗಿ ಮೈಕ್ರೋ ಫೈನಾನ್ ನಲ್ಲಿ ಮನೆ ನಿರ್ಮಾಣಕ್ಕಾಗಿ 12 ಲಕ್ಷ ರೂ. ಸಾಲ ಪಡೆದಿದ್ದರು. ಸುಸ್ತಿಯಾಗಿದ್ದಾರೆ ಎಂದು ಎರಡು ಬಾರಿ ಮನೆಗೆ ಬೀಗ ಜಡಿದಿದ್ದರು. ಕೆಲ ದಿನಗಳ ಹಿಂದೆ 3 ಲಕ್ಷ ರೂ. ಸೇರಿದಂತೆ ಈವರೆಗೆ 8 ಲಕ್ಷ ರೂ. ಪಾವತಿಸಿದ್ದರು.

ಈ ಬಾರಿ ಮಳೆ ಕೊರತೆಯಿಂದ ಜಮೀನಿನಲ್ಲಿ ಬೆಳೆಯೂ ಕೈ ಹತ್ತಿರಲಿಲ್ಲ. ಮತ್ತೆ ಮೈಕ್ರೋ ಫೈನಾನ್ ನವರು ಬಂದು ಮನೆ ಬೀಗ ಹಾಕುತ್ತಾರೆ. ಗ್ರಾಮದಲ್ಲಿ ಅವಮಾನವಾಗುತ್ತದೆ ಎಂಬ ಆತಂಕದಿಂದ ರಂಜಿತ್ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಗಾಗ ಪತ್ನಿ ಹತ್ತಿರ ಹೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಬಿಳಿಕೆರೆ ಠಾಣಾ ಪೊಲೀಸರಿಗೆ ಪತಿ ರಂಜಿತ್ ಸಾವಿಗೆ ಮೈಕ್ರೋ ಫೈನಾನ್ಸ್‌ನವರ ಕಿರುಕುಳವೇ ಕಾರಣ ಎಂದು ಪತ್ನಿ ಭಾಗ್ಯ ದೂರು ನೀಡಿದ್ದಾರೆ.

ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:
error: Content is protected !!