ಮೈಸೂರು

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ ನಡೆದಿದೆ.

ನಂಜಾಪುರದ ವಸಂತಕುಮಾರ್ ಪುತ್ರ ರಂಜಿತ್ (32) ಮೃತರು. ಇವರಿಗೆ ತಂದೆ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

ರಂಜಿತ್ ಕೆ.ಆರ್.ನಗರದಲ್ಲಿ ಶಾಖೆ ಹೊಂದಿರುವ ಖಾಸಗಿ ಮೈಕ್ರೋ ಫೈನಾನ್ ನಲ್ಲಿ ಮನೆ ನಿರ್ಮಾಣಕ್ಕಾಗಿ 12 ಲಕ್ಷ ರೂ. ಸಾಲ ಪಡೆದಿದ್ದರು. ಸುಸ್ತಿಯಾಗಿದ್ದಾರೆ ಎಂದು ಎರಡು ಬಾರಿ ಮನೆಗೆ ಬೀಗ ಜಡಿದಿದ್ದರು. ಕೆಲ ದಿನಗಳ ಹಿಂದೆ 3 ಲಕ್ಷ ರೂ. ಸೇರಿದಂತೆ ಈವರೆಗೆ 8 ಲಕ್ಷ ರೂ. ಪಾವತಿಸಿದ್ದರು.

ಈ ಬಾರಿ ಮಳೆ ಕೊರತೆಯಿಂದ ಜಮೀನಿನಲ್ಲಿ ಬೆಳೆಯೂ ಕೈ ಹತ್ತಿರಲಿಲ್ಲ. ಮತ್ತೆ ಮೈಕ್ರೋ ಫೈನಾನ್ ನವರು ಬಂದು ಮನೆ ಬೀಗ ಹಾಕುತ್ತಾರೆ. ಗ್ರಾಮದಲ್ಲಿ ಅವಮಾನವಾಗುತ್ತದೆ ಎಂಬ ಆತಂಕದಿಂದ ರಂಜಿತ್ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಗಾಗ ಪತ್ನಿ ಹತ್ತಿರ ಹೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಬಿಳಿಕೆರೆ ಠಾಣಾ ಪೊಲೀಸರಿಗೆ ಪತಿ ರಂಜಿತ್ ಸಾವಿಗೆ ಮೈಕ್ರೋ ಫೈನಾನ್ಸ್‌ನವರ ಕಿರುಕುಳವೇ ಕಾರಣ ಎಂದು ಪತ್ನಿ ಭಾಗ್ಯ ದೂರು ನೀಡಿದ್ದಾರೆ.

ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

8 mins ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

1 hour ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

1 hour ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

1 hour ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

4 hours ago