ಮೈಸೂರು: ದಸರಾ ಅಂಗವಾಗಿ ರೈತ ದಸರಾ ಉಪಸಮಿತಿಯು ಇಲ್ಲಿನ ಜೆ.ಕೆ ಮೈದಾನದಲ್ಲಿ ಇಂದು(ಅ.7) ಏರ್ಪಡಿಸಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್ ತಾಲ್ಲೂಕಿನ ಕಗ್ಗಲೀಪುರದ ತನಿಷ್ ಪಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ 42.84ಲೀ. ಹಾಲು ನೀಡಿ, ಪ್ರಥಮ ಸ್ಥಾನದೊಂದಿಗೆ 1 ಲಕ್ಷ ರೂ ನಗದು ಬಹುಮಾನವನ್ನು ಮಾಲೀಕರಿಗೆ ದೊರಕಿಸಿತು.
ಚನ್ನರಾಯಪಟ್ಟಣ ತಾಲ್ಲೂಕಿನ ತೋಟಿ ಗ್ರಾಮದ ಬಾಬು ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ 80 ಸಾವಿರ,
ಆನೇಕಲ್ ತಾಲ್ಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್.ಪಿ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ – 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ 60 ಸಾವಿರ ನಗದು, ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ AGM ಡೈರಿ ಫಾರಂ ದೇವರಾಜ್ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ – 40.580 ಲೀ ಕರೆಯುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡು 40 ಸಾವಿರ ನಗದು ಹಣ ಗಳಿಸಿತು.
ಈ ಸಂದರ್ಭದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ನಾಲ್ಕನೇ ಸ್ಥಾನ ಪಡೆದುಕೊಂಡ ವಿಜೇತರಿಗೆ ನಗದು ಬಹುಮಾನ ಜೊತೆಗೆ ಹಾಲಿನ ಕ್ಯಾನ್, ಟ್ರೋಫಿ, ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಿ. ಉಳಿದ ಎಲ್ಲಾ ಸ್ಪರ್ಧಿಗಳಿಗೂ ಹಾಲಿನ ಕ್ಯಾನ್ ನೀಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.
ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ 8 ಹಸುಗಳು ಭಾಗವಹಿಸಿದ್ದು, ಒಟ್ಟು 20 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಅದರಲ್ಲಿ ಇಂದು ಬೆಳಿಗ್ಗೆ ಮತ್ತು ಸಂಜೆ ಅಂತಿಮ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಹೆಚ್ಚಿನ ಪ್ರಮಾಣದ ಹಾಲನ್ನು ಕರೆದ ಸ್ಪರ್ಧಿಗೆ ಪ್ರಶಸ್ತಿ ನೀಡಲಾಯಿತು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…