ಮೈಸೂರು: ದಸರಾ ಅಂಗವಾಗಿ ರೈತ ದಸರಾ ಉಪಸಮಿತಿಯು ಇಲ್ಲಿನ ಜೆ.ಕೆ ಮೈದಾನದಲ್ಲಿ ಇಂದು(ಅ.7) ಏರ್ಪಡಿಸಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್ ತಾಲ್ಲೂಕಿನ ಕಗ್ಗಲೀಪುರದ ತನಿಷ್ ಪಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ 42.84ಲೀ. ಹಾಲು ನೀಡಿ, ಪ್ರಥಮ ಸ್ಥಾನದೊಂದಿಗೆ 1 ಲಕ್ಷ ರೂ ನಗದು ಬಹುಮಾನವನ್ನು ಮಾಲೀಕರಿಗೆ ದೊರಕಿಸಿತು.
ಚನ್ನರಾಯಪಟ್ಟಣ ತಾಲ್ಲೂಕಿನ ತೋಟಿ ಗ್ರಾಮದ ಬಾಬು ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ 80 ಸಾವಿರ,
ಆನೇಕಲ್ ತಾಲ್ಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್.ಪಿ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ – 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ 60 ಸಾವಿರ ನಗದು, ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ AGM ಡೈರಿ ಫಾರಂ ದೇವರಾಜ್ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ – 40.580 ಲೀ ಕರೆಯುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡು 40 ಸಾವಿರ ನಗದು ಹಣ ಗಳಿಸಿತು.
ಈ ಸಂದರ್ಭದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ನಾಲ್ಕನೇ ಸ್ಥಾನ ಪಡೆದುಕೊಂಡ ವಿಜೇತರಿಗೆ ನಗದು ಬಹುಮಾನ ಜೊತೆಗೆ ಹಾಲಿನ ಕ್ಯಾನ್, ಟ್ರೋಫಿ, ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಿ. ಉಳಿದ ಎಲ್ಲಾ ಸ್ಪರ್ಧಿಗಳಿಗೂ ಹಾಲಿನ ಕ್ಯಾನ್ ನೀಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.
ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ 8 ಹಸುಗಳು ಭಾಗವಹಿಸಿದ್ದು, ಒಟ್ಟು 20 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಅದರಲ್ಲಿ ಇಂದು ಬೆಳಿಗ್ಗೆ ಮತ್ತು ಸಂಜೆ ಅಂತಿಮ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಹೆಚ್ಚಿನ ಪ್ರಮಾಣದ ಹಾಲನ್ನು ಕರೆದ ಸ್ಪರ್ಧಿಗೆ ಪ್ರಶಸ್ತಿ ನೀಡಲಾಯಿತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…