ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ನಗರದ ಕಿರುರಂಗಮಂದಿರದಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಬಂದು ೭೮ ವರ್ಷಗಳಾಗಿದ್ದು, ಇನ್ನೂ ಸಾಮಾಜಿಕ ಬಹಿಷ್ಕಾರ, ಮರ್ಯಾದ ಹತ್ಯೆ ಪೈಶಾಚಿಕ ಘಟನೆಗಳು ನಡೆಯುತ್ತಿವೆ. ಇದಕ್ಕಾಗಿ ಪ್ರತ್ಯೇಕ ಕಾನೂನು ರೂಪಿಸಲು ಮುಂದಾಗಿದ್ದು, ಅದು ಎರಡು ಬಾರಿ ವಾಪಾಸ್ ಬಂದಿದೆ. ಸಂವಿಧಾನದಲ್ಲಿ ಎಲ್ಲವೂ ಸರಿಯಿದೆ. ಆದರೆ, ಸಂವಿಧಾನ ಆಶಯಗಳನ್ನು ಜಾರಿಗೊಳಿಸುವ ಆಳುವ ಮನಸ್ಸುಗಳು ಸರಿಯಿಲ್ಲವಾಗಿದೆ. ಇದರಿಂದ ಕಾನೂನು ಕೇವಲ ಶ್ರೀಮಂತರ ಪರ ಕೆಲಸ ಮಾಡುತ್ತಿದ್ದೀಯಾ ಎಂಬ ಪ್ರಶ್ನೆಗಳು ಮೂಡಿದೆ ಎಂದು ತಿಳಿಸಿದರು.
ಬಿಹಾರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯ ಸಂದರ್ಭದಲ್ಲಿ ಮಹಿಳಾ ಮತದಾರರಿಗೆ ೧೦ ಸಾವಿರ ರೂ. ನೀಡಿದರು. ಚುನಾವಣಾ ಆಯೋಗ ಅದನ್ನು ನೋ ಡಿಕೊಂಡು ಸುಮ್ಮನೆ ಇದೆ. ಬಿಜೆಪಿಗೆ ಅಭೂತ ಪೂರ್ವ ಯಶಸ್ಸು ಸಿಕಿತ್ತು. ಈ ರೀತಿ ಹಂತ ಹಂತವಾಗಿ ಬಿಜೆಪಿಯ ಕೋಮುವಾದಿಗಳು ಚುನಾವಣೆಯ ಎರಡು ದಿನದ ಮುನ್ನ ೧೦ ಸಾವಿರ ರೂ. ಹಾಕಿ ಮುಗ್ಧ ಜನರ ದಿಕ್ಕು ತಪ್ಪಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ಉಳಿಸಿ ಬಲಪಡಿಸುವ ಕೆಲಸ ಮತ್ತು ಪ್ರಶ್ನಿಸುವ ವೇದಿಕೆ ಇಂದು ಸೃಷ್ಟಿಯಾಗಿದೆ ಎಂದರು.
ಈ ಹಿಂದೆ ರಾಷ್ಟ್ರಪತಿಗಳಾಗಿದ್ದ ಡಾ.ರಾಜೇಂದ್ರ ಪ್ರಸಾದ್ ಅವರು ಯಾರದೋ ಕಾಲು ಮುಟ್ಟಿ ನಮಸ್ಕಾರ ಮಾಡಿದರು. ಅದಕ್ಕೆ ದೇಶದಾದ್ಯಂತ ಉಗ್ರವಾದ ಪ್ರತಿಭಟನೆ ನಡೆಯಿತು. ನಂತರ ಅವರು ಕ್ಷಮೆ ಕೇಳಿದರು. ಆದರೆ, ಇಂದಿನ ಪ್ರಧಾನಿಗಳು ಎಲ್ಲಾ ದೇವಸ್ಥಾನಗಳಿಗೆ ಹೋಗಿ ಅವರೇ ಪೂಜೆ ಮಾಡಿ ಬರುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗ ಹೊಗಲಾಡಿಸಲು ಗಂಟೆ-ಜಾಗಟೆ ಬಾರಿಸಿ ಎನ್ನುತ್ತಾರೆ. ದೇಶವನ್ನು ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವದಲ್ಲಿ ಕಟ್ಟಬೇಕು ಎಂದು ಸಂವಿಧಾನ ಹೇಳುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮೌಢ್ಯ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಬಹುರೂಪಿ ವಿವಿಧ ರೂಪಗಳಿಂದ ಅತ್ಯಂತ ಪ್ರಾಬಲ್ಯವಾದ ಮಾಧ್ಯಮವಾಗಿದೆ. ಇದನ್ನು ಬಳಸಿಕೊಂಡು ಚಳವಳಿಗಳು ಗಟ್ಟಿಯಾಗಿದೆ. ಇದರ ಮೂಲಕವೇ ನಾವು ಯುವ ಸಮೂಹವನ್ನು ಎಚ್ಚರಿಸಬೇಕಿದೆ. ಇಂದು ಸಂವಿಧಾನ ಅಪಾಯದಲ್ಲಿದೆ. ಒಂದೇ ಇಂದೇ ವಿಷಯವನ್ನು ನಿಶಬ್ಧಗೊಳಿಸುತ್ತಿದ್ದಾರೆ. ಐಟಿ, ಇಡಿ, ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಇಂತಹ ಕಾರ್ಯಕ್ರಮದ ಮೂಲಕ ಸಮೃದ್ಧ ಭಾರತದ ಜೊತೆಗೆ ಬಹುತ್ವದ ಭಾರತದ ನಿರ್ಮಾಣದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.
ಈ ಹಿಂದೆ ಹಲವರು ರಂಗಾಯಣ ನಿರ್ದೇಶಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಆದರೆ ಅಡ್ಡಂಡ ಸಿ.ಕಾರ್ಯಪ್ಪ ಅವರು ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪರ್ವ ನಾಟಕ ಮಾಡಿಸುವಾಗ ಅದರಲ್ಲಿರುವ ಬರುವ ಕೋಣದ ಮಾಂಸ ತಿನ್ನುವ ವಿಷಯವನ್ನು ಬಿಟ್ಟು ನಾಟಕ ಮಾಡಿಸಿದರು. ಇತಿಹಾಸ ಬಿಟ್ಟು ನಾಟಕ ಮಾಡುವುದು ಸರಿಯಲ್ಲ. ಜ್ಞಾನ ವ್ಯವಸ್ಥಿತವಾಗಿರುತ್ತದೆ. ಆದರೆ, ಇತಿಹಾಸ ಆಗಲ್ಲ. ಇತಿಹಾಸ ಹಿಂದಿನ ದಾಖಲೆಯಾಗಿದೆ. ಅದನ್ನು ಬಿಟ್ಟು ಮುಂದೆ ಸಾಗಲು ಸಾಧ್ಯವಿಲ್ಲ ಎಂದರು.
ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ…
ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ…
ಬೆಂಗಳೂರು : ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ…
ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್…
ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ…
ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್ಗೆ ಕಡಿವಾಣ ಹಾಕಿ, ಮಾದಕ ವಸ್ತು…