ಮೈಸೂರು

ಪುತ್ರನ ಪರ ಸಚಿವ ಹೆಚ್‌.ಸಿ.ಮಹದೇವಪ್ಪ ಮತಯಾಚನೆ !

ತಲಕಾಡು : ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯಕ್ತಿಪೂಜೆ ಮಾರಕ, ವ್ಯಕ್ತಿ ಪೂಜೆಯಿಂದ ಸರ್ವಾಧಿಕಾರ ಬೆಳೆಯಲಿದೆ, ಸರ್ವಾಧಿಕಾರ ಪ್ರಜಾ ಪ್ರಭುತ್ವ ವ್ಯವಸ್ಥೆ ನಾಶಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕಳವಳ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪುತ್ರ ಸುನೀಲ್ ಬೋಸ್ ಪರ ಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿರುವ ಡಾ.ಹೆಚ್ ಸಿ. ಮಹದೇವಪ್ಪ ಭಾನುವಾರ ತಲಕಾಡು ಹೋಬಳಿ ಕೈ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಜನರಿಂದ ಜನರಿಗೋಸ್ಕರ :  ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಆಡಳಿತ ವ್ಯವಸ್ಥೆ, ಸಂವಿಧಾನ ಸರ್ವರಿಗೂ ಮುಕ್ತ ಸ್ವಾತಂತ್ರ್ಯ ನೀಡಿದೆ, ಸಂವಿಧಾನದಲ್ಲಿ ಶ್ರೇಷ್ಠ ಕನಿಷ್ಠ ‌ಧರ್ಮ ಎಂಬುದಿಲ್ಲ. ಬಡಜನತೆಯ ಬದುಕಿನ ಮೇಲೆ ದುಷ್ಪರಿಣಾಮ ಬೀರುತ್ತಿರುವ ಬೆಲೆ ಏರಿಕೆ ಬಗ್ಗೆ ಮಾತನಾಡದ ಬಿಜೆಪಿಯವರು, ಜನತೆಯ ಬಾವನಾತ್ಮಕ ಧರ್ಮ ದೇವರುಗಳ ಬಗ್ಗೆ ಪ್ರಚೋದಿಸಿ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು. ಈ ಬಾರಿಯ ಚುನಾವಣೆ ಸಂವಿಧಾನ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದು ಸಚಿವರು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದರು.

ಬಂಡವಾಳ ಶಾಹಿಗಳ ಪರ: ರಾಜ್ಯದ ಬಡ ಮಹಿಳೆಯರ ಬದುಕಿಗೆ ನೆರವಾಗಲು ಮಾಹೆಯಾನ 4ರಿಂದ 5ಸಾವಿರ ವರಮಾನವನ್ನು ಸರ್ಕಾರ ಗ್ಯಾರಂಟಿ ರೂಪದಲ್ಲಿ ಒದಗಿಸಿಕೊಟ್ಟಿದೆ. ಇದರಿಂದ ರಾಜ್ಯದ ಹಣಕಾಸು ವ್ಯವಸ್ಥೆ ದಿವಾಳಿಯಾಗುತ್ತದೆ ಎಂದು ಬೊಬ್ಬೆ ಹೊಡೆಯುವ ಬಿಜೆಪಿಗರು,
ಬಂಡವಾಳ ಶಾಹಿಗಳ ಪರವಾಗಿದ್ದು, ಬಡಜನರ ಪರವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದಾತದ ಬಗ್ಗೆ ಸ್ಪಷ್ಟತೆ ಇಲ್ಲದವರು: ಮಳೆಬೆಳೆ ಇಲ್ಲದೆ ರಾಜ್ಯದ ಜನತೆ ಸಂಕಷ್ಟದಲ್ಲಿದ್ದು ಬರಪರಿಹಾರ ಕೊಡಿ ಎಂದು ಕೇಂದ್ರಕ್ಕೆ ಕೇಳಿದರೆ ದಂಬ್ಡಿ ಕಾಸು ಕೊಟ್ಟಿಲ್ಲ ಎಂದು ಟೀಕಾ ಪ್ರಹಾರ ನಡೆಸಿದ ಸಚಿವರು, ಸಭೆಯಲ್ಲಿ ಜೆಡಿಎಸ್ ಪಕ್ಷದ ಧೋರಣೆ ಬಗ್ಗೆಯೂ ತರಾಟೆಗೆ ತೆಗೆದುಕೊಂಡರು. ಬಿಜೆಪಿ ಕಾಂಗ್ರೆಸ್ ಜತೆ ಸಮಾನ ಅಂತರ ಕಾಪಾಡಿಕೊಳ್ಳುತ್ತೇವೆ ಎಂದು ಹೇಳಿದವರು, ಬಿಜೆಪಿ, ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದರು. ರಾಜಕೀಯ ಪಕ್ಷದ ತತ್ವ ಸಿದ್ದಾಂತ ಸ್ಪಷ್ಟತೆಯೇ ಇಲ್ಲದವರಿಂದ, ಸಂವಿಧಾನದ ಆಶಯಗಳ ಸಮರ್ಪಕ ಜಾರಿ ನಿರೀಕ್ಷಿಸುವುದಾದರು ಹೇಗೆಂಬ..? ಪ್ರಶ್ನೆ ಮುಂದಿಟ್ಟರು.

ತಾ.ಪಂ.ಮಾಜಿ ಸದಸ್ಯ ಕುಕ್ಕೂರ್ ಗಣೇಶ್ ಮಾತನಾಡಿ, ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಯುವ ಮುಖಂಡ ಸುನೀಲ್ ಬೋಸ್ ಅವರನ್ನು, ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರಲು ಪಕ್ಷದ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸುವಂತೆ ಕರೆ ನೀಡಿದರು. ತಾ.ಪಂ ಮಾಜಿ ಉಪಾಧ್ಯಕ್ಷ ಕುಕ್ಕೂರು ಪ್ರಸನ್ನ ಮಾತನಾಡಿ ಸರ್ಕಾರದಿಂದ ತಲಕಾಡಿಗೆ ನೂತನ ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡಿಸಿ ಕೊಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಭೆಯಲ್ಲಿ ಚಿತ್ರನಿರ್ದೇಶಕ, ಎಸ್.ನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೂಗೂರು ಎಂ.ಡಿ.ಬಸವರಾಜು, ಜಿ.ಪಂ. ಮಾಜಿ ಸದಸ್ಯ ಟಿ.ಹೆಚ್.ಮಂಜುನಾಥ್, ತಾ.ಪಂ.ಮಾಜಿ ಸದಸ್ಯ ನರಸಿಂಹಮಾದನಾಯಕ, ಗ್ರಾ.ಪಂ.ಮಾಜಿ ಅಧ್ಯಕ್ಷ ಮಲ್ಲಾಣಿ, ಜಿ.ಕೆಂಪಯ್ಯ, ಬೆಟ್ಟಹಳ್ಳಿ ನಾಗರಾಜು, ಕೆಪಿಸಿಸಿ ಸದಸ್ಯ ಸುಂದರನಾಯಕ, ಯಜಮಾನ್ ಜೆ. ರಾಜು, ಹೋಬಳಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪಾರ್ವತಮ್ಮ,ಅಶೋಕ್ ಪಟೇಲ್, ಬುಲೆಟ್ ಶ್ರೀನಿವಾಸ ಕುಕ್ಕೂರ್ ಗಣೇಶ್, ಪ್ರಸನ್ನ, ಹೆಮ್ಮಿಗೆ‌ ಶೇಷಾದ್ರಿ ಪಾಪಣ್ಣ, ಕಾವೇರಿಪುರ ಶಾಂತರಾಜು, ಶ್ರೀಕಂಠಪ್ಪ, ಟಿ.ಬೆಟ್ಟಹಳ್ಳಿ ಕೋಕಿಲಾ,ತಾ.ಪಂ.ಮಾಜಿ ಸದಸ್ಯೆ ಮಲ್ಲಾಜಮ್ಮ ಹೆಚ್.ರಾಜು, ಕಾಳಿಹುಂಡಿ ಮಹೇಂದ್ರ ಇತರೆ ಪ್ರಮುಖರು ಪಾಲ್ಗೊಂಡಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

14 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

14 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

15 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

15 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

16 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

16 hours ago