Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಪಂಡಿತ್ ರಾಜೀವ್ ಅವರ ಆರೋಗ್ಯ ವಿಚಾರಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿರುವ  ಪದ್ಮಶ್ರೀ ರಾಜೀವ್‌ ತಾರಾನಾಥ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಇಂದು(ಮೇ.26) ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿರುವ ತಾರಾನಾಥ್ ಅವರ ಆರೋಗ್ಯದ ಸ್ಥಿತಿ ಗತಿ ಕುರಿತು ಸಚಿವರು ವೈದ್ಯ ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರ ಜೊತೆ ಚರ್ಚಿಸಿದರು. ಈ ವೇಳೆ ಸರ್ಕಾರದ ನೆರವು ದೊರಕಿಸಿಕೊಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಅವರು ಈ ಸಂದರ್ಭದಲ್ಲಿ ಸಚಿವರ ಜೊತೆ ಉಪಸ್ಥಿತರಿದ್ದರು.

ಸರೋದ್‌ ವಾದಕ್‌ ಪಂಡಿತ್‌ ರಾಜೀವ್‌ ತಾರಾನಾಥ್ ಅವರ ಹಿನ್ನೆಲೆ;
ತಾರಾನಾಥ್ ಅವರು ಸಂಗೀತ ಲೋಕದಲ್ಲಷ್ಟೇ ಅಲ್ಲದೆ, ಇಂಗ್ಲೀಷ್ ಪ್ರಾಧ್ಯಾಪಕರಾಗಿ, ಅನುವಾದಕರಾಗಿ ಸಾಹಿತ್ಯ ಕ್ಷೇತ್ರದಲ್ಲೂ ಸಾಕಷ್ಟು ಕೆಲಸ ಮಾಡಿದ್ದು, ಇವರ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ ೧೯೯೮ (ಕರ್ನಾಟಕ ಸರಕಾರ, ಭಾರತ), ಸಂಗೀತ ನೃತ್ಯ ಅಕ್ಯಾಡೆಮಿ ಪ್ರಶಸ್ತಿ, ೧೯೯೩,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ೧೯೯೬, ಕೆಂಪೇಗೌಡ ಪ್ರಶಸ್ತಿ, ೨೦೦೬, ಗಾಯನ ಸಮಾಜದಿಂದ ಸಂಗೀತ ಕಲಾರತ್ನ, ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ, ಭ್ರಮರಾಂಬಾ ಎನ್ ನಾಗರಾಜ್ ಬಂಗಾರದ ಪದಕ, ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪ್ರಶಸ್ತಿ ಅಲ್ಲದೇ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯೂ ಲಭಿಸಿದೆ.

Tags:
error: Content is protected !!