ಮೈಸೂರು

ಪಂಡಿತ್ ರಾಜೀವ್ ಅವರ ಆರೋಗ್ಯ ವಿಚಾರಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿರುವ  ಪದ್ಮಶ್ರೀ ರಾಜೀವ್‌ ತಾರಾನಾಥ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಇಂದು(ಮೇ.26) ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿರುವ ತಾರಾನಾಥ್ ಅವರ ಆರೋಗ್ಯದ ಸ್ಥಿತಿ ಗತಿ ಕುರಿತು ಸಚಿವರು ವೈದ್ಯ ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರ ಜೊತೆ ಚರ್ಚಿಸಿದರು. ಈ ವೇಳೆ ಸರ್ಕಾರದ ನೆರವು ದೊರಕಿಸಿಕೊಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಅವರು ಈ ಸಂದರ್ಭದಲ್ಲಿ ಸಚಿವರ ಜೊತೆ ಉಪಸ್ಥಿತರಿದ್ದರು.

ಸರೋದ್‌ ವಾದಕ್‌ ಪಂಡಿತ್‌ ರಾಜೀವ್‌ ತಾರಾನಾಥ್ ಅವರ ಹಿನ್ನೆಲೆ;
ತಾರಾನಾಥ್ ಅವರು ಸಂಗೀತ ಲೋಕದಲ್ಲಷ್ಟೇ ಅಲ್ಲದೆ, ಇಂಗ್ಲೀಷ್ ಪ್ರಾಧ್ಯಾಪಕರಾಗಿ, ಅನುವಾದಕರಾಗಿ ಸಾಹಿತ್ಯ ಕ್ಷೇತ್ರದಲ್ಲೂ ಸಾಕಷ್ಟು ಕೆಲಸ ಮಾಡಿದ್ದು, ಇವರ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ ೧೯೯೮ (ಕರ್ನಾಟಕ ಸರಕಾರ, ಭಾರತ), ಸಂಗೀತ ನೃತ್ಯ ಅಕ್ಯಾಡೆಮಿ ಪ್ರಶಸ್ತಿ, ೧೯೯೩,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ೧೯೯೬, ಕೆಂಪೇಗೌಡ ಪ್ರಶಸ್ತಿ, ೨೦೦೬, ಗಾಯನ ಸಮಾಜದಿಂದ ಸಂಗೀತ ಕಲಾರತ್ನ, ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ, ಭ್ರಮರಾಂಬಾ ಎನ್ ನಾಗರಾಜ್ ಬಂಗಾರದ ಪದಕ, ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪ್ರಶಸ್ತಿ ಅಲ್ಲದೇ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯೂ ಲಭಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

8 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

10 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

10 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

10 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

10 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

10 hours ago