ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ವಿಶ್ವಕವಿ ಕುವೆಂಪು ಚಿತಾಭಸ್ಮ ಸ್ಮಾರಕ ಭವನದ ಶಂಕುಸ್ಥಾಪನೆ ನೆರವೇರಿಸಿದರು.
ಭವನದಲ್ಲಿ ಕುವೆಂಪು ಚಿಂತನೆ ಪಸರಿಸುವ ಕಾರ್ಯ ನಡೆಯಲಿದೆ. ಸಂಶೋಧಕರಿಗೆ ವಸತಿ ವ್ಯವಸ್ಥೆ, ಗ್ರಂಥಾಲಯ, ಸಭಾಭವನ, ಅತಿಥಿಗಳ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ನಿರ್ಮಿತಿ ಕೇಂದ್ರವು 10 ತಿಂಗಳಲ್ಲಿ ನಿರ್ಮಾಣ ಪೂರ್ಣಗೊಳಿಸುವ ಗುರಿ ಹೊಂದಿದೆ.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರೊ.ಕೆ.ಎಸ್ ಭಗವಾನ್ ಮಾತನಾಡಿ, ಕುವೆಂಪು ಅವರು ಸಾಹಿತ್ಯದ ಎಲ್ಲ ಪ್ರಾಕಾರಗಳಲ್ಲೂ ಕೆಲಸ ಮಾಡಿ ಅದ್ಭುತ ಕೊಡುಗೆ ನೀಡಿದ್ದಾರೆ. ಆದ್ದರಿಂದಲೇ 20ನೇ ಶತಮಾನ ಕುವೆಂಪು ಯುಗ ಎಂದರು.
ಭಗವಾನ್ ಬುದ್ದ ರೈತನ ಮಗ. ಮನುಷ್ಯರೆಲ್ಲ ಒಂದು ಎಂದು ಮೊದಲು ಹೇಳಿದ್ದು ಬುದ್ಧ. ನಾವೆಲ್ಲರೂ ಅವರನ್ನು ಅನುಸರಿಸಬೇಕು. ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಅವರನ್ನು ಎಷ್ಟು ಸ್ಮರಿಸಿದರೂ ಸಾಲುವುದಿಲ್ಲ. ಸಮಾನತೆ ಹಾಗೂ ಸ್ವತಂತ್ರ್ಯದ ಪರಿಕಲ್ಪನೆ ನೀಡಿದ್ದು ಬುದ್ದ. ಬುದ್ಧನನ್ನೇ ಅನುಸರಿಸಿ ಅವರ ತತ್ವ ಅಳವಡಿಸಿಕೊಂಡು, ದೇಶಕ್ಕೆ ಸಮಾನತೆ ಸಂವಿಧಾನ ನೀಡಿದ್ದು ಅಂಬೇಡ್ಕರ್ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸದರಾದ ಸುನೀಲ್ ಬೋಸ್, ನಿವೇಶನ ದಾನಿಗಳಾದ ಶಂಕರೇಗೌಡ, ನಾಗಾನಂದ ಸ್ವಾಮೀಜಿ ಮುಂತಾದವರು ಉಪಸ್ಥಿತರಿದ್ದರು.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…