ಮೈಸೂರು

ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿ : ಸಚಿವ ಮಹದೇವಪ್ಪ

ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ

ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಎಂದು ಸಚಿವರಿಂದ ಸೂಚನೆ

ತಿ.ನರಸೀಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಈ ತಾಲ್ಲೂಕನ್ನು ಪ್ರತಿನಿಧಿಸುತ್ತೇವೆ. ಯಾವುದೇ ಕಾರಣಕ್ಕೂ ಇಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು. ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ನಿರ್ದೇಶಿಸಿದರು.

ತಾಲ್ಲೂಕಿನ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದೆ‌. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಿಸಲು ಜವಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಎರಡು ದಿನ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸರ್ಕಾರವು ಜನರ ಪರ ಇದೇ ಎಂಬ ಆತ್ಮವಿಶ್ವಾಸ ಮೂಡಿಸುವುದರಲ್ಲಿ ಅಧಿಕಾರಿಗಳ ಪಾತ್ರ ಹೆಚ್ಚಿದೆ. ಈ ನಿಟ್ಟಿನಲ್ಲಿ ಕಚೇರಿಯಲ್ಲಿ ಅಧಿಕಾರಿಗಳು ಕೂರಬಾರದು. ಜನರ ಬಳಿಗೆ ತೆರಳಬೇಕು. ಅವರ ಕಷ್ಟಗಳನ್ನು ಆಲಿಸಿ ಪರಿಹರಿಸಬೇಕು ಎಂದರು‌.

ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೌಲಭ್ಯ, ಪಡಿತರ ವಿತರಣೆ ಸೇರಿದಂತೆ ಎಲ್ಲಾ ಬಗೆಯ ಮೂಲಭೂತ ಸೌಕರ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಶ್ರಮವಹಿಸಬೇಕು. ಸರ್ಕಾರದ ಸೌಲಭ್ಯಗಳಿಂದ ಯಾರೂ ವಂಚಿತರಾಗಬಾರದು ಎಂದು ಹೇಳಿದರು.

ಕೃಷಿ ಇಲಾಖೆ
ತಾಲ್ಲೂಕಿನಲ್ಲಿ 44,136 ಹೆಕ್ಟೇರ್ ಸಾಗುವಳಿ ವಿಸ್ತೀರ್ಣವಿದೆ. ಕೃಷಿಗೆ ಉಪಯೋಗವಿರುವ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆ ಬಿತ್ತನೆಗೆ ಕ್ರಮವಹಿಸಿ. ರಸಗೊಬ್ಬರ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ವ್ಯಾಪಕ ಅರಿವು ಮೂಡಿಸಿ. ಅದಕ್ಕೆ ಪರ್ಯಾಯವಾಗಿ ಸಾವಯವ ಗೊಬ್ಬರ ಬಳಸುವಂತೆ ತಿಳಿಸಿ.

ಸರ್ಕಾರದಿಂದ ರೈತರಿಗೆ ದೊರಕುವ ಸೌಲಭ್ಯವನ್ನು ಪರಿಣಾಮಕಾರಿಯಾಗಿ ತಲುಪಿಸಿ. ಈ ಸಂಬಂಧ ಮಾಹಿತಿಯನ್ನು ಕಾಲಕಾಲಕ್ಕೆ ನನಗೆ ನೀಡಬೇಕು. ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ವಿತರಿಸಬೇಕು. ಬೆಳೆಗಳಿಗೆ ನೀರಿನ ಕೊರೆತೆಯಾಗಬಾರದು. ಜನರ ಸ್ವಾವಲಂಬಿ ಬದುಕಿಗೆ ಹಾಗೂ ಆರ್ಥಿಕವಾಗಿ ಸಬಲತೆಗೆ ಕೃಷಿ ಕ್ಷೇತ್ರ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಸೂಚಿಸಿದರು.

ತಿ.ನರಸೀಪುರ ಪುರಸಭೆ
ಪುರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಕೊರತೆಯಾಗಬಾರದು. ಬೀದಿ ದೀಪ, ರಸ್ತೆ, ಚರಂಡಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಬೇಕು. ಸ್ವಚ್ಛತೆ ಕಾಪಾಡಬೇಕು. ಈ ಕುರಿತು ಜವಜ್ದಾರಿಯಿಂದ ಕೆಲಸ ಮಾಡಿ ಎಂದು ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಒಳಚರಂಡಿ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ವಸತಿ ರಹಿತರನ್ನು ಗುರುತಿಸಿ ವಸತಿ ಸೌಲಭ್ಯ ಒದಗಿಸಬೇಕು. ಮೇಲ್ಸೆತುವೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ತಿಳಿಸಿದರು.

ಸಂಸದರಾದ ಸುನೀಲ್ ಬೋಸ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿನ ರಸ್ತೆಗಳಲ್ಲಿ ಬೀದಿದೀಪ ಅಳವಡಿಸಬೇಕು. ಬಂಗಾರಪ್ಪ ಬಡಾವಣೆ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಗೋಪಾಲಪುರ ಬಡಾವಣೆಯಲ್ಲಿ ಕಾನೂನುಬಾಹಿರವಾಗಿ ಅತಿಕ್ರಮಿಸಿರುವ ಜಾಗವನ್ನು ತರೆವುಗೊಳಿಸಿ, ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಲು ಕ್ರಮವಹಿಸಿ ಎಂದು ತಾಕೀತು ಮಾಡಿದರು.

ಸಮಾಜ ಕಲ್ಯಾಣ ಇಲಾಖೆ
ಪರಿಶಿಷ್ಟ ಜಾತಿ ಜನರು ವಾಸಿಸುವ ಗ್ರಾಮಗಳಲ್ಲಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ಅದ್ಯತೆಯಲ್ಲಿ ಪರಿಗಣಿಸಿ ಕೈಗೊಳ್ಳಬೇಕು. ಸ್ಮಾಶಾನವಿಲ್ಲದ ಗ್ರಾಮಗಳಲ್ಲಿ ಜಾಗವನ್ನು ಗುರುತಿಸಬೇಕು. ಸ್ಥಗಿತಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗಳನ್ನು ಪುನಾರಂಭಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಪುರಸಭೆ ಅಧ್ಯಕ್ಷರಾದ ವಸಂತ ಶ್ರೀಕಂಠ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ತಹಸಿಲ್ದಾರ್ ಸುರೇಶ್ ಆಚಾರ್, ತಾಲ್ಲೂಕು ಪಂಚಾಯತ್ ಇಒ ಆನಂತ ರಾಜು ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಕೆ.ಡಿ.ಪಿ ಸಭೆಯ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

45 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago