ಮೈಸೂರು

ಹನಿಟ್ರ್ಯಾಪ್‌ ವಿರುದ್ಧ ಹೊಸ ಕಾಯ್ದೆ ಬರಲಿ : ಸಚಿವ ʻಎಚ್‌ಸಿಎಂʻ ಆಗ್ರಹ

ಮೈಸೂರು: ಹನಿಟ್ರ್ಯಾಪ್‌ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆಗ್ರಹಿಸಿದರು.

ರಾಜ್ಯದಲ್ಲಿ ಸಚಿವರ ಹನಿಟ್ರ್ಯಾಪ್‌ ವಿಚಾರ ಕುರಿತು ಶನಿವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಎಂಬುದು ಪಿತೂರಿ. ಈ ಹಿಂದಿನಿಂದಲೂ ಇದು ನಡೆಯುತ್ತಾ ಬಂದಿದೆ. ಇದಕ್ಕೆ ಸಂಬಂಧಿಸಿದ ಕಾಯ್ದೆ ತರಬೇಕು. ದುರುದ್ದೇಶದ ಈ ಪಿತೂರಿ ಮಾಡುವ ಗುಂಪುಗಳನ್ನು ಮಟ್ಟ ಹಾಕಬೇಕು. ಖಾಸಗಿತನದ ಗೌಪ್ಯತೆ ಧಕ್ಕೆ ತರುತ್ತಿದ್ದಾರೆ. ಇಂತಹ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಒತ್ತಾಯಿಸಿದರು.

ಹನಿಟ್ರ್ಯಾಪ್‌ ಸ್ವಪಕ್ಷದವರೇ ಮಾಡಿದ್ದಾರೆ ಎಂದು ಸಚಿವ ರಾಜಣ್ಣ ಯಾರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲಿ. ತನಿಖೆಯಲ್ಲಿ ಮಾತ್ರ ಯಾರು ಮಾಡಿದರು, ಏನು ಮಾಡಿದರು ಎಂಬುದು ಗೊತ್ತಾಗುತ್ತದೆ. ಯಾರಾದರೂ ಸರಿ ಸತ್ಯ ಹೊರಗಡೆ ಬರಲಿ. ಸುಮ್ಮನೆ ಅವರು, ಇವರು ಅನ್ನೋದು ಸರಿಯಲ್ಲ. ಯಾರೇ ಮಾಡಿದರೂ ಕ್ರಮ ತೆಗೆದುಕೊಳ್ಳಲಿ. ಸುಮ್ಮನೆ ಊಹಾಪೋಹದ ಮಾತು ಬೇಡ ಎಂದು ಹೇಳಿದರು.

ನಾನು ಎಲ್ಲರಿಗೂ ಹಲೋ ಎನ್ನುತ್ತೇನೆ. ಎಲ್ಲರೂ ನನಗೆ ಪ್ರತಿಕ್ರಿಯೆ ಕೊಡುತ್ತಾರೆ. ಅದರಿಂದಲೇ ಹನಿಟ್ರ್ಯಾಪ್‌ ಅನ್ನೋದು ಹೇಗೆ. ನನಗೆ ಅಂತಹ ಯಾವ ವಿಚಾರಗಳು ಗೊತ್ತಾಗುವುದಿಲ್ಲ. ನನ್ನನ್ನು ತುಳಿಯುವ ಪ್ರಯತ್ನ ಯಾರು ಮಾಡುತ್ತಾರೋ, ಮಾಡಿದಾರೋ ಅದು ನನಗೆ ಗೊತ್ತಿಲ್ಲ. ಆದರೆ ನಾನಂತೂ ಸದೃಢವಾಗಿ ಕುಳಿತ್ತಿದ್ದೇನೆ. ಹನಿಟ್ರ್ಯಾಪ್‌ ವಿಚಾರದಲ್ಲಿ ರಾಜಣ್ಣ ಜೊತೆ ಪ್ರತ್ಯೇಕ ಸಭೆ ನಡೆಸುವ ಅಗತ್ಯವೇನು ಇಲ್ಲ. ಏಕಂದರೆ ಈ ವಿಚಾರ ಈಗಾಗಲೇ ತೀರ್ಮಾನ ಆಗಿದೆ. ಉನ್ನತ ಮಟ್ಟದ ತನಿಖೆ ನಡೆಯಲಿ ಎಂದು ಹೇಳಿದರು.

ಹಲೋ ಅಂತ ಇಲ್ಲಿ ಹೇಳಿದ್ರೆ, ಅಲ್ಲೂ ಹಲೋ ಅಂತಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ . ಸಿಎಂ ಸಿದ್ದರಾಮಯ್ಯ ಪರ ಇದ್ದೋರನ್ನ ಟಾರ್ಗೆಟ್ ಮಾಡ್ತಿದ್ದಾರೆಯೇ ಎಂದು ನನಗೆ ಅನಿಸಲ್ಲ. ಆದರೆ ಮಾಡುತ್ತಿರಬಹುದು. ನಾನು ಕೂಡ ಸಿಕ್ಕ ಸಿಕ್ಕವರಿಗೇ ಹಾಯ್, ಹಲೋ ಹೇಳಿದ್ದೀನಿ ಎಂದರು.

ನಾನು ನನ್ನ ರಾಜಕೀಯ ಇತಿಹಾಸದಲ್ಲಿ ಈ ರೀತಿ ಹನಿಟ್ರ್ಯಾಪ್‌ಗಳನ್ನ ನೋಡಿಲ್ಲ. ರಾಜ್ಯದ ರಾಜಕೀಯ ನೈತಿಕ ಅಧಃಪತನದತ್ತ ತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

7 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

7 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

7 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

7 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

7 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

7 hours ago