ಮೈಸೂರು

ಹನಿಟ್ರ್ಯಾಪ್‌ ವಿರುದ್ಧ ಹೊಸ ಕಾಯ್ದೆ ಬರಲಿ : ಸಚಿವ ʻಎಚ್‌ಸಿಎಂʻ ಆಗ್ರಹ

ಮೈಸೂರು: ಹನಿಟ್ರ್ಯಾಪ್‌ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆಗ್ರಹಿಸಿದರು.

ರಾಜ್ಯದಲ್ಲಿ ಸಚಿವರ ಹನಿಟ್ರ್ಯಾಪ್‌ ವಿಚಾರ ಕುರಿತು ಶನಿವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಎಂಬುದು ಪಿತೂರಿ. ಈ ಹಿಂದಿನಿಂದಲೂ ಇದು ನಡೆಯುತ್ತಾ ಬಂದಿದೆ. ಇದಕ್ಕೆ ಸಂಬಂಧಿಸಿದ ಕಾಯ್ದೆ ತರಬೇಕು. ದುರುದ್ದೇಶದ ಈ ಪಿತೂರಿ ಮಾಡುವ ಗುಂಪುಗಳನ್ನು ಮಟ್ಟ ಹಾಕಬೇಕು. ಖಾಸಗಿತನದ ಗೌಪ್ಯತೆ ಧಕ್ಕೆ ತರುತ್ತಿದ್ದಾರೆ. ಇಂತಹ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಒತ್ತಾಯಿಸಿದರು.

ಹನಿಟ್ರ್ಯಾಪ್‌ ಸ್ವಪಕ್ಷದವರೇ ಮಾಡಿದ್ದಾರೆ ಎಂದು ಸಚಿವ ರಾಜಣ್ಣ ಯಾರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲಿ. ತನಿಖೆಯಲ್ಲಿ ಮಾತ್ರ ಯಾರು ಮಾಡಿದರು, ಏನು ಮಾಡಿದರು ಎಂಬುದು ಗೊತ್ತಾಗುತ್ತದೆ. ಯಾರಾದರೂ ಸರಿ ಸತ್ಯ ಹೊರಗಡೆ ಬರಲಿ. ಸುಮ್ಮನೆ ಅವರು, ಇವರು ಅನ್ನೋದು ಸರಿಯಲ್ಲ. ಯಾರೇ ಮಾಡಿದರೂ ಕ್ರಮ ತೆಗೆದುಕೊಳ್ಳಲಿ. ಸುಮ್ಮನೆ ಊಹಾಪೋಹದ ಮಾತು ಬೇಡ ಎಂದು ಹೇಳಿದರು.

ನಾನು ಎಲ್ಲರಿಗೂ ಹಲೋ ಎನ್ನುತ್ತೇನೆ. ಎಲ್ಲರೂ ನನಗೆ ಪ್ರತಿಕ್ರಿಯೆ ಕೊಡುತ್ತಾರೆ. ಅದರಿಂದಲೇ ಹನಿಟ್ರ್ಯಾಪ್‌ ಅನ್ನೋದು ಹೇಗೆ. ನನಗೆ ಅಂತಹ ಯಾವ ವಿಚಾರಗಳು ಗೊತ್ತಾಗುವುದಿಲ್ಲ. ನನ್ನನ್ನು ತುಳಿಯುವ ಪ್ರಯತ್ನ ಯಾರು ಮಾಡುತ್ತಾರೋ, ಮಾಡಿದಾರೋ ಅದು ನನಗೆ ಗೊತ್ತಿಲ್ಲ. ಆದರೆ ನಾನಂತೂ ಸದೃಢವಾಗಿ ಕುಳಿತ್ತಿದ್ದೇನೆ. ಹನಿಟ್ರ್ಯಾಪ್‌ ವಿಚಾರದಲ್ಲಿ ರಾಜಣ್ಣ ಜೊತೆ ಪ್ರತ್ಯೇಕ ಸಭೆ ನಡೆಸುವ ಅಗತ್ಯವೇನು ಇಲ್ಲ. ಏಕಂದರೆ ಈ ವಿಚಾರ ಈಗಾಗಲೇ ತೀರ್ಮಾನ ಆಗಿದೆ. ಉನ್ನತ ಮಟ್ಟದ ತನಿಖೆ ನಡೆಯಲಿ ಎಂದು ಹೇಳಿದರು.

ಹಲೋ ಅಂತ ಇಲ್ಲಿ ಹೇಳಿದ್ರೆ, ಅಲ್ಲೂ ಹಲೋ ಅಂತಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ . ಸಿಎಂ ಸಿದ್ದರಾಮಯ್ಯ ಪರ ಇದ್ದೋರನ್ನ ಟಾರ್ಗೆಟ್ ಮಾಡ್ತಿದ್ದಾರೆಯೇ ಎಂದು ನನಗೆ ಅನಿಸಲ್ಲ. ಆದರೆ ಮಾಡುತ್ತಿರಬಹುದು. ನಾನು ಕೂಡ ಸಿಕ್ಕ ಸಿಕ್ಕವರಿಗೇ ಹಾಯ್, ಹಲೋ ಹೇಳಿದ್ದೀನಿ ಎಂದರು.

ನಾನು ನನ್ನ ರಾಜಕೀಯ ಇತಿಹಾಸದಲ್ಲಿ ಈ ರೀತಿ ಹನಿಟ್ರ್ಯಾಪ್‌ಗಳನ್ನ ನೋಡಿಲ್ಲ. ರಾಜ್ಯದ ರಾಜಕೀಯ ನೈತಿಕ ಅಧಃಪತನದತ್ತ ತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago