ಮೈಸೂರು

ಹನಿಟ್ರ್ಯಾಪ್‌ ವಿರುದ್ಧ ಹೊಸ ಕಾಯ್ದೆ ಬರಲಿ : ಸಚಿವ ʻಎಚ್‌ಸಿಎಂʻ ಆಗ್ರಹ

ಮೈಸೂರು: ಹನಿಟ್ರ್ಯಾಪ್‌ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆಗ್ರಹಿಸಿದರು.

ರಾಜ್ಯದಲ್ಲಿ ಸಚಿವರ ಹನಿಟ್ರ್ಯಾಪ್‌ ವಿಚಾರ ಕುರಿತು ಶನಿವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಎಂಬುದು ಪಿತೂರಿ. ಈ ಹಿಂದಿನಿಂದಲೂ ಇದು ನಡೆಯುತ್ತಾ ಬಂದಿದೆ. ಇದಕ್ಕೆ ಸಂಬಂಧಿಸಿದ ಕಾಯ್ದೆ ತರಬೇಕು. ದುರುದ್ದೇಶದ ಈ ಪಿತೂರಿ ಮಾಡುವ ಗುಂಪುಗಳನ್ನು ಮಟ್ಟ ಹಾಕಬೇಕು. ಖಾಸಗಿತನದ ಗೌಪ್ಯತೆ ಧಕ್ಕೆ ತರುತ್ತಿದ್ದಾರೆ. ಇಂತಹ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಒತ್ತಾಯಿಸಿದರು.

ಹನಿಟ್ರ್ಯಾಪ್‌ ಸ್ವಪಕ್ಷದವರೇ ಮಾಡಿದ್ದಾರೆ ಎಂದು ಸಚಿವ ರಾಜಣ್ಣ ಯಾರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲಿ. ತನಿಖೆಯಲ್ಲಿ ಮಾತ್ರ ಯಾರು ಮಾಡಿದರು, ಏನು ಮಾಡಿದರು ಎಂಬುದು ಗೊತ್ತಾಗುತ್ತದೆ. ಯಾರಾದರೂ ಸರಿ ಸತ್ಯ ಹೊರಗಡೆ ಬರಲಿ. ಸುಮ್ಮನೆ ಅವರು, ಇವರು ಅನ್ನೋದು ಸರಿಯಲ್ಲ. ಯಾರೇ ಮಾಡಿದರೂ ಕ್ರಮ ತೆಗೆದುಕೊಳ್ಳಲಿ. ಸುಮ್ಮನೆ ಊಹಾಪೋಹದ ಮಾತು ಬೇಡ ಎಂದು ಹೇಳಿದರು.

ನಾನು ಎಲ್ಲರಿಗೂ ಹಲೋ ಎನ್ನುತ್ತೇನೆ. ಎಲ್ಲರೂ ನನಗೆ ಪ್ರತಿಕ್ರಿಯೆ ಕೊಡುತ್ತಾರೆ. ಅದರಿಂದಲೇ ಹನಿಟ್ರ್ಯಾಪ್‌ ಅನ್ನೋದು ಹೇಗೆ. ನನಗೆ ಅಂತಹ ಯಾವ ವಿಚಾರಗಳು ಗೊತ್ತಾಗುವುದಿಲ್ಲ. ನನ್ನನ್ನು ತುಳಿಯುವ ಪ್ರಯತ್ನ ಯಾರು ಮಾಡುತ್ತಾರೋ, ಮಾಡಿದಾರೋ ಅದು ನನಗೆ ಗೊತ್ತಿಲ್ಲ. ಆದರೆ ನಾನಂತೂ ಸದೃಢವಾಗಿ ಕುಳಿತ್ತಿದ್ದೇನೆ. ಹನಿಟ್ರ್ಯಾಪ್‌ ವಿಚಾರದಲ್ಲಿ ರಾಜಣ್ಣ ಜೊತೆ ಪ್ರತ್ಯೇಕ ಸಭೆ ನಡೆಸುವ ಅಗತ್ಯವೇನು ಇಲ್ಲ. ಏಕಂದರೆ ಈ ವಿಚಾರ ಈಗಾಗಲೇ ತೀರ್ಮಾನ ಆಗಿದೆ. ಉನ್ನತ ಮಟ್ಟದ ತನಿಖೆ ನಡೆಯಲಿ ಎಂದು ಹೇಳಿದರು.

ಹಲೋ ಅಂತ ಇಲ್ಲಿ ಹೇಳಿದ್ರೆ, ಅಲ್ಲೂ ಹಲೋ ಅಂತಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ . ಸಿಎಂ ಸಿದ್ದರಾಮಯ್ಯ ಪರ ಇದ್ದೋರನ್ನ ಟಾರ್ಗೆಟ್ ಮಾಡ್ತಿದ್ದಾರೆಯೇ ಎಂದು ನನಗೆ ಅನಿಸಲ್ಲ. ಆದರೆ ಮಾಡುತ್ತಿರಬಹುದು. ನಾನು ಕೂಡ ಸಿಕ್ಕ ಸಿಕ್ಕವರಿಗೇ ಹಾಯ್, ಹಲೋ ಹೇಳಿದ್ದೀನಿ ಎಂದರು.

ನಾನು ನನ್ನ ರಾಜಕೀಯ ಇತಿಹಾಸದಲ್ಲಿ ಈ ರೀತಿ ಹನಿಟ್ರ್ಯಾಪ್‌ಗಳನ್ನ ನೋಡಿಲ್ಲ. ರಾಜ್ಯದ ರಾಜಕೀಯ ನೈತಿಕ ಅಧಃಪತನದತ್ತ ತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

2 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

15 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

17 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

20 hours ago