Categories: ಮೈಸೂರು

ಕೆ.ಆರ್.ನಗರ ಮಲೆ ಮಹದೇಶ್ವರ ಸ್ವಾಮಿ ಉತ್ಸವದಲ್ಲಿ ಸಚಿವ ಈಶ್ವರಖಂಡ್ರೆ ಭಾಗಿ

ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತೀಕ ಮಾಸ ಬೆಳಕಿನ ಹಬ್ಬ, ನಮ್ಮೆಲ್ಲರಲ್ಲೂ ಇರುವ ಅಜ್ಞಾನವೆಂಬ ಅಂಧಕಾರವನ್ನು ತೊಡದುಹಾಕಿ, ಸುಜ್ಞಾನವೆಂಬ ಬೆಳಕನ್ನು ಹಚ್ಚುವ ಮಾಸ ಕಾರ್ತೀಕ. ಈ ಮಾಸದಲ್ಲಿ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅರ್ಚನೆ, ಲಕ್ಷ ದೀಪೋತ್ಸವ ಮತ್ತು ಉತ್ಸವಗಳು ನಡೆಯುತ್ತವೆ. ಧಾರ್ಮಿಕ ವಿಚಾರಗಳ ವಿನಿಮಯ ಆಗುತ್ತದೆ. ಸಹಬಾಳ್ವೆಯ ಮಹತ್ವ ಸಾರುತ್ತವೆ ಎಂದು ಹೇಳಿದರು.

ಮಲೆ ಮಹದೇಶ್ವರ ಸ್ವಾಮಿಯವರು ಜನಪದರ ದೇವರು, ಅವರು ಹುಲಿಯ ಮೇಲೆ ಸಂಚಾರ ಮಾಡುತ್ತಿದ್ದರು. ಆದರೆ ಅವರ ಮನಸ್ಸು ಮಲ್ಲಿಗೆಯಷ್ಟೇ ಮೃದುವಾಗಿತ್ತು. ಹೀಗಾಗಿಯೇ ಅವರು ಮಲ್ಲಿಗೆ ಮಾದಪ್ಪನಾಗಿ ಜನರ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.

15ನೇ ಶತಮಾನದಲ್ಲಿ ಜನರ ಸಂಕಷ್ಟಗಳನ್ನು ತಮ್ಮ ಅಲೌಕಿಕಶಕ್ತಿಯಿಂದ ಪರಿಹರಿಸಲು ಅವತರಿಸಿದ ದೈವಾಂಶ ಸಂಭೂತರಾದ ಮಹದೇಶ್ವರಸ್ವಾಮಿಯವರು ಬೆಟ್ಟದ ಸರಣಿಯ ರಮಣೀಯತೆಗೆ ಮನಸೋತು ಮಹದೇಶ್ವರ ಬೆಟ್ಟದಲ್ಲಿಯೇ ನೆಲೆಸಿದರು. ಸುದೀರ್ಘ ತಪಸ್ಸು ಮಾಡಿ ಸಿದ್ಧಿಯನ್ನು ಪಡೆದರು.

ಇಂದಿಗೂ ತಮ್ಮ ತಪಃಶಕ್ತಿಯನ್ನು ಜನರ ಕಲ್ಯಾಣ ಮಾಡುತ್ತಿದ್ದಾರೆ. ತಮ್ಮ ಅಲೌಕಿಕ ಶಕ್ತಿಯನ್ನು ಸಮಾಜದ ಅದರಲ್ಲೂ ದೀನ ದಲಿತರ, ಶೋಷಿತರನ್ನು ಹರಸುತ್ತಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ರವಿಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

33 mins ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

9 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

9 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

10 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

13 hours ago