ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತೀಕ ಮಾಸ ಬೆಳಕಿನ ಹಬ್ಬ, ನಮ್ಮೆಲ್ಲರಲ್ಲೂ ಇರುವ ಅಜ್ಞಾನವೆಂಬ ಅಂಧಕಾರವನ್ನು ತೊಡದುಹಾಕಿ, ಸುಜ್ಞಾನವೆಂಬ ಬೆಳಕನ್ನು ಹಚ್ಚುವ ಮಾಸ ಕಾರ್ತೀಕ. ಈ ಮಾಸದಲ್ಲಿ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅರ್ಚನೆ, ಲಕ್ಷ ದೀಪೋತ್ಸವ ಮತ್ತು ಉತ್ಸವಗಳು ನಡೆಯುತ್ತವೆ. ಧಾರ್ಮಿಕ ವಿಚಾರಗಳ ವಿನಿಮಯ ಆಗುತ್ತದೆ. ಸಹಬಾಳ್ವೆಯ ಮಹತ್ವ ಸಾರುತ್ತವೆ ಎಂದು ಹೇಳಿದರು.
ಮಲೆ ಮಹದೇಶ್ವರ ಸ್ವಾಮಿಯವರು ಜನಪದರ ದೇವರು, ಅವರು ಹುಲಿಯ ಮೇಲೆ ಸಂಚಾರ ಮಾಡುತ್ತಿದ್ದರು. ಆದರೆ ಅವರ ಮನಸ್ಸು ಮಲ್ಲಿಗೆಯಷ್ಟೇ ಮೃದುವಾಗಿತ್ತು. ಹೀಗಾಗಿಯೇ ಅವರು ಮಲ್ಲಿಗೆ ಮಾದಪ್ಪನಾಗಿ ಜನರ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.
15ನೇ ಶತಮಾನದಲ್ಲಿ ಜನರ ಸಂಕಷ್ಟಗಳನ್ನು ತಮ್ಮ ಅಲೌಕಿಕಶಕ್ತಿಯಿಂದ ಪರಿಹರಿಸಲು ಅವತರಿಸಿದ ದೈವಾಂಶ ಸಂಭೂತರಾದ ಮಹದೇಶ್ವರಸ್ವಾಮಿಯವರು ಬೆಟ್ಟದ ಸರಣಿಯ ರಮಣೀಯತೆಗೆ ಮನಸೋತು ಮಹದೇಶ್ವರ ಬೆಟ್ಟದಲ್ಲಿಯೇ ನೆಲೆಸಿದರು. ಸುದೀರ್ಘ ತಪಸ್ಸು ಮಾಡಿ ಸಿದ್ಧಿಯನ್ನು ಪಡೆದರು.
ಇಂದಿಗೂ ತಮ್ಮ ತಪಃಶಕ್ತಿಯನ್ನು ಜನರ ಕಲ್ಯಾಣ ಮಾಡುತ್ತಿದ್ದಾರೆ. ತಮ್ಮ ಅಲೌಕಿಕ ಶಕ್ತಿಯನ್ನು ಸಮಾಜದ ಅದರಲ್ಲೂ ದೀನ ದಲಿತರ, ಶೋಷಿತರನ್ನು ಹರಸುತ್ತಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ರವಿಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…