Categories: ಮೈಸೂರು

ಕೆ.ಆರ್.ನಗರ ಮಲೆ ಮಹದೇಶ್ವರ ಸ್ವಾಮಿ ಉತ್ಸವದಲ್ಲಿ ಸಚಿವ ಈಶ್ವರಖಂಡ್ರೆ ಭಾಗಿ

ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತೀಕ ಮಾಸ ಬೆಳಕಿನ ಹಬ್ಬ, ನಮ್ಮೆಲ್ಲರಲ್ಲೂ ಇರುವ ಅಜ್ಞಾನವೆಂಬ ಅಂಧಕಾರವನ್ನು ತೊಡದುಹಾಕಿ, ಸುಜ್ಞಾನವೆಂಬ ಬೆಳಕನ್ನು ಹಚ್ಚುವ ಮಾಸ ಕಾರ್ತೀಕ. ಈ ಮಾಸದಲ್ಲಿ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅರ್ಚನೆ, ಲಕ್ಷ ದೀಪೋತ್ಸವ ಮತ್ತು ಉತ್ಸವಗಳು ನಡೆಯುತ್ತವೆ. ಧಾರ್ಮಿಕ ವಿಚಾರಗಳ ವಿನಿಮಯ ಆಗುತ್ತದೆ. ಸಹಬಾಳ್ವೆಯ ಮಹತ್ವ ಸಾರುತ್ತವೆ ಎಂದು ಹೇಳಿದರು.

ಮಲೆ ಮಹದೇಶ್ವರ ಸ್ವಾಮಿಯವರು ಜನಪದರ ದೇವರು, ಅವರು ಹುಲಿಯ ಮೇಲೆ ಸಂಚಾರ ಮಾಡುತ್ತಿದ್ದರು. ಆದರೆ ಅವರ ಮನಸ್ಸು ಮಲ್ಲಿಗೆಯಷ್ಟೇ ಮೃದುವಾಗಿತ್ತು. ಹೀಗಾಗಿಯೇ ಅವರು ಮಲ್ಲಿಗೆ ಮಾದಪ್ಪನಾಗಿ ಜನರ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.

15ನೇ ಶತಮಾನದಲ್ಲಿ ಜನರ ಸಂಕಷ್ಟಗಳನ್ನು ತಮ್ಮ ಅಲೌಕಿಕಶಕ್ತಿಯಿಂದ ಪರಿಹರಿಸಲು ಅವತರಿಸಿದ ದೈವಾಂಶ ಸಂಭೂತರಾದ ಮಹದೇಶ್ವರಸ್ವಾಮಿಯವರು ಬೆಟ್ಟದ ಸರಣಿಯ ರಮಣೀಯತೆಗೆ ಮನಸೋತು ಮಹದೇಶ್ವರ ಬೆಟ್ಟದಲ್ಲಿಯೇ ನೆಲೆಸಿದರು. ಸುದೀರ್ಘ ತಪಸ್ಸು ಮಾಡಿ ಸಿದ್ಧಿಯನ್ನು ಪಡೆದರು.

ಇಂದಿಗೂ ತಮ್ಮ ತಪಃಶಕ್ತಿಯನ್ನು ಜನರ ಕಲ್ಯಾಣ ಮಾಡುತ್ತಿದ್ದಾರೆ. ತಮ್ಮ ಅಲೌಕಿಕ ಶಕ್ತಿಯನ್ನು ಸಮಾಜದ ಅದರಲ್ಲೂ ದೀನ ದಲಿತರ, ಶೋಷಿತರನ್ನು ಹರಸುತ್ತಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ರವಿಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago